ಶಿವಮೊಗ್ಗ: “ಶಿವಮೊಗ್ಗಕ್ಕೆ ದುಬೈಯಿಂದ ಬಂದ ವ್ಯಕ್ತಿಗೆ ಕೊರೊನಾ ನೆಗೆಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲದ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಗೆ ದುಬೈಯಿಂದ ಆಗಮಿಸಿದ ವ್ಯಕ್ತಿಗೆ ಕೊರೊನಾ ನೆಗೆಟಿವ್ ವರದಿ ಬಂದಿದೆ. ಆತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರಿಗೂ ಕೂಡಾ ಕೊರೊನಾ ನೆಗೆಟಿವ್ ಬಂದಿದೆ. ಅಲ್ಲದೇ, ವ್ಯಕ್ತಿಯೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ 39 ಮಂದಿಯ ತಪಾಸಣೆ ಮಾಡಲಾಗಿದೆ. ಅವರಿಗೂ ನೆಗೆಟಿವ್ ಬಂದಿದೆ. ಈ ಬಗ್ಗೆ ಯಾರೂ ಕೂಡಾ ಭಯಪಡುವ ಅವಶ್ಯಕತೆ ಇಲ್ಲ” ಎಂದಿದ್ದಾರೆ.
ಕ್ರೀಡಾಭಿಮಾನಿಗಳಿಗೆ ಗುಡ್ ನ್ಯೂಸ್ : ಜುಲೈನಿಂದ ಪ್ರೊ ಕಬಡ್ಡಿ ಪ್ರಾಂಭ -Vishwanews24
“ಸರ್ಕಾರಿ ಆಸ್ಪತ್ರೆಗಳಲ್ಲಿ ಜಿಲ್ಲೆಯಲ್ಲಿ 60ವರ್ಷ ಮೇಲ್ಪಟ್ಟವರಿ ಕೊರೊನಾ ಲಸಿಕೆ ಹಾಕಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ, ಆಯುರ್ವೇದಿಕ್ ಕಾಲೇಜು ಆಸ್ಪತ್ರೆ ಸೇರಿದಂತೆ 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ 41 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.
“ಜಿಲ್ಲೆಯ 8 ಖಾಸಗಿ ಆಸ್ಪತ್ರೆಗಳಲ್ಲಿ 250. ರೂ. ದರ ನಿಗದಿ ಮಾಡಿ ಲಸಿಕೆ ನೀಡಲಾಗುತ್ತಿದೆ. ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಿ” ಎಂದು ಕೋರಿದ್ದಾರೆ.
“ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಮ್ಮ ರಾಜ್ಯದಲ್ಲಿಯೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಪ್ರಾರಂಭ ಮಾಡಲು ಸರ್ಕಾರ ಅನುಮತಿ ನೀಡಿಲ್ಲ. ಆರನೇ ತರಗತಿಯಿಂದ ಮೇಲಿನವರಿಗೆ ಮಾತ್ರವೇ ಶಾಲೆ ನಡೆಸಲು ಸರ್ಕಾರ ಅನುಮತಿ ನೀಡಿದೆ” ಎಂದಿದ್ದಾರೆ.
ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…