ಬೆಂಗಳೂರು, : ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಸ್ಪೋಟದಿಂದ ಸಾವನ್ನಪ್ಪಿದ ಕಾರ್ಮಿಕರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಶಿವಮೊಗ್ಗದಲ್ಲಿ ನಡೆದ ಘಟನೆಯಲ್ಲಿ ಜೀವಗಳು ಸಾವಿಗೀಡಾಗಿರುವುದು ದುಃಖ ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತದೆ” ಎಂದು ತಿಳಿಸಿದ್ದಾರೆ.
ಶಿವಮೊಗ್ಗ: ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಡೈನಾಮೈಟ್ ಸ್ಫೋಟ : 10 ಕಾರ್ಮಿಕರ ಸಾವು
ಅಬ್ಬಲಗೆರೆ–ಹುಣಸೋಡು ಮಧ್ಯೆ ಇರುವ ಜಲ್ಲಿ ಕ್ರಷರ್ ಬಳಿ ಸಂಗ್ರಹಿಸಿಟ್ಟಿದ್ದ ಭಾರೀ ಪ್ರಮಾಣದ ಡೈನಾಮೈಟ್ ಗುರುವಾರ ರಾತ್ರಿ ಸ್ಫೋಟಿಸಿ, ಬಿಹಾರ ಮೂಲದ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಲ್ಲು ಗಣಿಗಾರಿಕೆಗಾಗಿ ಲಾರಿಯಲ್ಲಿ ತಂದಿದ್ದ 50 ಡೈನಾಮೈಟ್ ಬಾಕ್ಸ್ಗಳು ಸ್ಫೋಟಗೊಂಡಿದ್ದು ಕಾರ್ಮಿಕರ ದೇಹಗಳು ಸಂಪೂರ್ಣವಾಗಿ ಛಿದ್ರವಾಗಿವೆ.
ಭೂಕಂಪನದ ಸಂದರ್ಭದಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಭೂಮಿ ಕಂಪಿಸಿದ ವೇಳೆ ಸ್ಪೋಟವಾಗಿರುವ ಸಾಧ್ಯತೆಯಿದೆ ಎಂದು ಕೂಡಾ ಹೇಳಲಾಗಿದೆ. ಆದರೆ ಇನ್ನು ಕೆಲವರು ಸ್ಫೋಟದಿಂದಲೇ ಭೂಕಂಪನದ ಅನುಭವವಾಗಿದೆ ಎಂದು ಹೇಳಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…