ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಸುನೀಲ್ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ – Vishwanews24

Featured, ರಾಜ್ಯ ನ್ಯೂಸ್

ಶಿವಮೊಗ್ಗ: ಬಜರಂಗದಳ ಸಹ ಸಂಚಾಲಕ ಸುನೀಲ್ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿದ ಸಮೀರ್

ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ.

ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್. ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್‌ ಪಾರಾಗಿದ್ದಾರೆ.

ಉಡುಪಿ : ತುಳು ಭಾಷೆಗೆ ನಮ್ಮ ರಾಜ್ಯದಲ್ಲಿ ಇನ್ನಾದರೂ ಮಾನ್ಯತೆ ಸಿಗಬಹುದು : ಪ್ರಮೋದ್ ಮಧ್ವರಾಜ್ ವಿಶ್ವಾಸ – Vishwanews24

ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್‌ ಭಾಗಿಯಾಗಿದ್ದ, ಯಾತ್ರೆ ಹೋಗುವ ವೇಳೆ ಸುನೀಲ್‌ ಅವರೊಂದಿಗೆ ಕಿರಿಕ್‌ ಮಾಡಿಕೊಂಡಿದ್ದ ಸಮೀರ್‌, ಅದೇ ನೆಪವನ್ನಿಟ್ಟುಕೊಂಡು ಸುನೀಲ್‌ ಮೇಲೆ ಹಲ್ಲೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಮಚ್ಚು ಬೀಸಿರುವ ದೃಶ್ಯ ಸಿಸಿಟಿಟವಿಯಲ್ಲಿ ಸೆರೆಯಾಗಿದ್ದು, ಘಟನೆ ಬಳಿಕ ಸಮೀರ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಸಾಗರ ಪೊಲೀಸ್‌ ಠಾಣೆಯಲ್ಲಿ ಸುನೀಲ್‌ ದೂರು ನೀಡಿದ್ದಾರೆ.

ಕುಂದಾಪುರ : ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಗೃಹ ನಿರ್ಮಿಸಿಕೊಟ್ಟ ಗೋವಿಂದ ಬಾಬು ಪೂಜಾರಿ – Vishwanews24

Leave a Reply