ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ.
ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್. ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್ ಪಾರಾಗಿದ್ದಾರೆ.
ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್ ಭಾಗಿಯಾಗಿದ್ದ, ಯಾತ್ರೆ ಹೋಗುವ ವೇಳೆ ಸುನೀಲ್ ಅವರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಮೀರ್, ಅದೇ ನೆಪವನ್ನಿಟ್ಟುಕೊಂಡು ಸುನೀಲ್ ಮೇಲೆ ಹಲ್ಲೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಮಚ್ಚು ಬೀಸಿರುವ ದೃಶ್ಯ ಸಿಸಿಟಿಟವಿಯಲ್ಲಿ ಸೆರೆಯಾಗಿದ್ದು, ಘಟನೆ ಬಳಿಕ ಸಮೀರ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಸಾಗರ ಪೊಲೀಸ್ ಠಾಣೆಯಲ್ಲಿ ಸುನೀಲ್ ದೂರು ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…