ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ.
ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್. ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್ ಪಾರಾಗಿದ್ದಾರೆ.
ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್ ಭಾಗಿಯಾಗಿದ್ದ, ಯಾತ್ರೆ ಹೋಗುವ ವೇಳೆ ಸುನೀಲ್ ಅವರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಮೀರ್, ಅದೇ ನೆಪವನ್ನಿಟ್ಟುಕೊಂಡು ಸುನೀಲ್ ಮೇಲೆ ಹಲ್ಲೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಮಚ್ಚು ಬೀಸಿರುವ ದೃಶ್ಯ ಸಿಸಿಟಿಟವಿಯಲ್ಲಿ ಸೆರೆಯಾಗಿದ್ದು, ಘಟನೆ ಬಳಿಕ ಸಮೀರ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಸಾಗರ ಪೊಲೀಸ್ ಠಾಣೆಯಲ್ಲಿ ಸುನೀಲ್ ದೂರು ನೀಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…