ಶಿವಮೊಗ್ಗ: ಹರ್ಷ ಹತ್ಯೆಯ ಮಾಸುವೇ ಮುನ್ನವೇ ಸೋಮವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಸಹ ಸಂಚಾಲಕ ಹಾಗೂ ಬಿಜೆಪಿ ಮುಖಂಡ ಕಾಂತರಾಜು ಎಂಬಾತನ ಮೇಲೆ ಮಾರಣಾಂತಿಕ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್ ದುಷ್ಕರ್ಮಿಗಳ ಕೈಯಲ್ಲಿದ್ದ ಮಚ್ಚು ಕಸಿದುಕೊಂಡ ಕಾಂತರಾಜ್, ದುಷ್ಕರ್ಮಿಗಳಿಂದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.
ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ದಾಳಿ ನಡೆದಿದ್ದು, ರಾತ್ರಿ 10.20ರ ಸುಮಾರಿಗೆ ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಬಂದ ಕಾಂತರಾಜ್ (27) ಮೇಲೆ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕಾಂತರಾಜುವಿನ ಬಲಗೈ ಗೆ ಮಚ್ಚಿನಿಂದ ಏಟು ಬಿದ್ದಿದೆ. ಇದಲ್ಲದೆ ದೇಹದ ಹಲವೆಡೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಮಾತನಾಡಿ, ಈಗಾಗಲೇ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು ಅವರ ವಿಚಾರಣೆ ನಡೆಸಲಾಗುತ್ತಿದೆ .ಬಜರಂಗದಳ ಸಂಘಟನೆ ಚಟುವಟಿಕೆಯಲ್ಲಿ ಇದ್ದಿದ್ದರಿಂದ ಈ ಹಲ್ಲೆಯಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದು ವಿಚಾರಣೆ ಬಳಿಕ ಮಾಹಿತಿ ಲಭಿಸಲಿದೆ ಎಂದು ಹೇಳಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…