ಶಿವಮೊಗ್ಗ: ಹರ್ಷ ಹತ್ಯೆಯ ಮಾಸುವೇ ಮುನ್ನವೇ ಸೋಮವಾರ ತಡರಾತ್ರಿ ಶಿವಮೊಗ್ಗದಲ್ಲಿ ಬಜರಂಗದಳ ಸಹ ಸಂಚಾಲಕ ಹಾಗೂ ಬಿಜೆಪಿ ಮುಖಂಡ ಕಾಂತರಾಜು ಎಂಬಾತನ ಮೇಲೆ ಮಾರಣಾಂತಿಕ ದಾಳಿ ನಡೆಸಲಾಗಿದೆ. ಅದೃಷ್ಟವಶಾತ್ ದುಷ್ಕರ್ಮಿಗಳ ಕೈಯಲ್ಲಿದ್ದ ಮಚ್ಚು ಕಸಿದುಕೊಂಡ ಕಾಂತರಾಜ್, ದುಷ್ಕರ್ಮಿಗಳಿಂದ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ.
ರಾಜೀವ್ ಗಾಂಧಿ ಬಡಾವಣೆಯಲ್ಲಿ ಈ ದಾಳಿ ನಡೆದಿದ್ದು, ರಾತ್ರಿ 10.20ರ ಸುಮಾರಿಗೆ ಮೂತ್ರ ವಿಸರ್ಜನೆಗೆಂದು ಮನೆಯಿಂದ ಹೊರಬಂದ ಕಾಂತರಾಜ್ (27) ಮೇಲೆ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಕಾಂತರಾಜುವಿನ ಬಲಗೈ ಗೆ ಮಚ್ಚಿನಿಂದ ಏಟು ಬಿದ್ದಿದೆ. ಇದಲ್ಲದೆ ದೇಹದ ಹಲವೆಡೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ಎಸ್ಪಿ ಲಕ್ಷ್ಮೀಪ್ರಸಾದ್ ಮಾತನಾಡಿ, ಈಗಾಗಲೇ ಕಾರ್ಯಾಚರಣೆ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು ಅವರ ವಿಚಾರಣೆ ನಡೆಸಲಾಗುತ್ತಿದೆ .ಬಜರಂಗದಳ ಸಂಘಟನೆ ಚಟುವಟಿಕೆಯಲ್ಲಿ ಇದ್ದಿದ್ದರಿಂದ ಈ ಹಲ್ಲೆಯಾಗಿದೆ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದು ವಿಚಾರಣೆ ಬಳಿಕ ಮಾಹಿತಿ ಲಭಿಸಲಿದೆ ಎಂದು ಹೇಳಿದ್ದಾರೆ.
ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…
ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್ ಸೊರಕೆ ಉಡುಪಿ:…
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…