ಶಿವಮೊಗ್ಗ: ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಸಂಭವಿಸಿ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ರವಿವಾರ ರಾತ್ರಿ ಸಂಭವಿಸಿದೆ.
ಹಲುಗಿನಕೊಪ್ಪದ ಜ್ಯೋತಿ (30 ವ), ಗಂಗಮ್ಮ (50 ವ) ಮತ್ತು ಸೌಜನ್ಯ (4 ವ) ಮೃತರು. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಮಲ್ಲಿಕಾರ್ಜನ, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ತೆರಳುತ್ತಿದ್ದರು. ಇವರು ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ಹೋಗುತ್ತಿದ್ದರು. ಕಾರು ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿತ್ತು.
ಶತ್ರುಗಳ ಕಾಟದಿಂದ ಮುಕ್ತಿ.. ನೋಡಿ ಇಂದಿನ ದಿನ ಭವಿಷ್ಯ..Vishwanews24
ಮಂಚಿಕೊಪ್ಪ ಬಳಿ ಕಾರು, ಬೈಕು ಮುಖಾಮುಖಿ ಢಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಗಂಗಮ್ಮ ನಿಧನರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಅಸುನೀಗಿದ್ದಾರೆ. ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಬೈಕು ನುಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…