ಶಿವಮೊಗ್ಗ: ಕಾರು ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಸಂಭವಿಸಿ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ರವಿವಾರ ರಾತ್ರಿ ಸಂಭವಿಸಿದೆ.
ಹಲುಗಿನಕೊಪ್ಪದ ಜ್ಯೋತಿ (30 ವ), ಗಂಗಮ್ಮ (50 ವ) ಮತ್ತು ಸೌಜನ್ಯ (4 ವ) ಮೃತರು. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಮಲ್ಲಿಕಾರ್ಜನ, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ತೆರಳುತ್ತಿದ್ದರು. ಇವರು ಶಿರಾಳಕೊಪ್ಪದಿಂದ ಹಲುಗಿನಕೊಪ್ಪದಲ್ಲಿರುವ ಮನೆಗೆ ಹೋಗುತ್ತಿದ್ದರು. ಕಾರು ಹಿರೆಕೆರೂರು ಕಡೆಯಿಂದ ಶಿರಾಳಕೊಪ್ಪ ಕಡೆಗೆ ತೆರಳುತ್ತಿತ್ತು.
ಶತ್ರುಗಳ ಕಾಟದಿಂದ ಮುಕ್ತಿ.. ನೋಡಿ ಇಂದಿನ ದಿನ ಭವಿಷ್ಯ..Vishwanews24
ಮಂಚಿಕೊಪ್ಪ ಬಳಿ ಕಾರು, ಬೈಕು ಮುಖಾಮುಖಿ ಢಿಕ್ಕಿಯಾಗಿದ್ದು, ಮಗು ಸೌಜನ್ಯ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಲ್ಲಿಕಾರ್ಜುನ, ಜ್ಯೋತಿ, ಗಂಗಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಶಿಕಾರಿಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆಸ್ಪತ್ರೆಯಲ್ಲಿ ಗಂಗಮ್ಮ ನಿಧನರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯುವ ವೇಳೆ ಜ್ಯೋತಿ ಅಸುನೀಗಿದ್ದಾರೆ. ಮಲ್ಲಿಕಾರ್ಜುನ ಅವರ ಸ್ಥಿತಿ ಗಂಭೀರವಾಗಿದೆ.
ಘಟನೆಯಲ್ಲಿ ಬೈಕು ನುಜ್ಜುಗುಜ್ಜಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಶಿರಾಳಕೊಪ್ಪ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…