ಶಿವಮೊಗ್ಗ : ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ , ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ; ಶಾಲಾ-ಕಾಲೇಜುಗಳಿಗೆ ರಜೆ  – Vishwanews24

Featured, ರಾಜ್ಯ ನ್ಯೂಸ್

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ , ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ; ಶಾಲಾ-ಕಾಲೇಜುಗಳಿಗೆ ರಜೆ  – Vishwanews24

ಶಿವಮೊಗ್ಗ:  ಜಿಲ್ಲೆಯಲ್ಲಿ ಈಗ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.

ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದೆ. ಪರಿಣಾಮ, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ(ಸಿಆರ್‌ಪಿಸಿ ಸೆಕ್ಷನ್‌ 144) ಜಾರಿಗೊಳಿಸಲಾಗಿದೆ. ಕಳೆದ ರಾತ್ರಿ 9 ಗಂಟೆಯ ಸುಮಾರಿಗೆ ಹರ್ಷ ಎಂಬಾತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಚುಚ್ಚಿ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಯುವಕನನ್ನು ತಕ್ಷಣ ದಾಖಲಾಯಿಸಿತಾದರೂ ಅಷ್ಟೊತ್ತಿಗೆ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಕಳೆದ ರಾತ್ರಿ ಆಗಿದ್ದೇನು?: ನಿನ್ನೆ ಭಾನುವಾರ ರಾತ್ರಿ 10 ಗಂಟೆ ಸುಮಾರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಭಾರತಿ ಕಾಲೊನಿ ಬಡಾವಣೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದರು.

ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಭಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ. ಕೂಡಲೇ ಯುವಕನನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿಸಿತಾದರೂ ಚಿಕಿತ್ಸೆ ಫಲಿಸದೇ ಹರ್ಷ ಪ್ರಾಣಬಿಟ್ಟಿದ್ದಾನೆ.

Leave a Reply