Featured

ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ : ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ – Vishwanews24

ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ : ಸಚಿವ ಕೆ ಎಸ್​ ಈಶ್ವರಪ್ಪ ಗಂಭೀರ ಆರೋಪ – Vishwanews24

ಬೆಂಗಳೂರು: ಶಿವಮೊಗ್ಗದಲ್ಲಿ ಕಳೆದ ರಾತ್ರಿ ಹರ್ಷ ಎಂಬ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ.

ಈ ಕುರಿತು ಶಿವಮೊಗ್ಗಕ್ಕೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳು ಈ ಕೊಲೆ ಮಾಡಿದ್ದಾರೆ, ಈವರೆಗೆ ಮುಸ್ಲಿಮರು ಬಾಲ ಬಿಚ್ಚಿರಲಿಲ್ಲ. ಇತ್ತೀಚೆಗೆ ರಾಷ್ಟ್ರಧ್ವಜ ಇಳಿಸಿ ಭಗವಾಧ್ವಜ ಹಾರಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರಿಂದಲೇ ಮುಸ್ಲಿಮರಿಗೆ ಕುಮ್ಮಕ್ಕು ಸಿಕ್ಕಿದೆ ಎಂದು ಕೂಡ ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡುತ್ತದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಂತಾಗಿದೆ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಘಟನೆ ಬಗ್ಗೆ ಸಿಎಂ ಮತ್ತು ಗೃಹ ಸಚಿವರ ಜೊತೆ ಮಾತನಾಡುತ್ತೇನೆ. ಡಿ ಕೆ ಶಿವಕುಮಾರ್ ಅವರು, ಸೂರತ್‌ನಿಂದ ಕೇಸರಿ ಶಾಲು ತರಿಸಿದ್ದಾಗಿ ಹೇಳಿಕೆ ನೀಡಿದ್ದರು. ಡಿಕೆ ಶಿವಕುಮಾರ್ ಆ ಹೇಳಿಕೆಯಿಂದ ಪ್ರೇರಣೆ ಪಡೆದು ಮುಸ್ಲಿಂ ಗೂಂಡಾಗಳು ನಿನ್ನೆ ರಾತ್ರಿ ನಮ್ಮ ಪ್ರಾಮಾಣಿಕ ಕಾರ್ಯಕರ್ತ ಹರ್ಷನ ಕೊಲೆ ಮಾಡಿದ್ದಾರೆ. ಯುವಕನ ಕಾರ್ಯವನ್ನು ನಾವೇ ಮುಂದೆ ನಿಂತು ಮಾಡುತ್ತೇವೆ ಎಂದರು.

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

18 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

22 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

52 minutes ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

58 minutes ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago