ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕಗ್ಗೊಲೆಯಾಗಿರುವ ಘಟನೆಯನ್ನು ಖಂಡಿಸುತ್ತೇನೆ, ಆಡಳಿತ ಪಕ್ಷದ ಹಿರಿಯ ನಾಯಕರು ಇರುವಂತಹ ಜಿಲ್ಲೆಯಲ್ಲಿ ರಾತ್ರೋರಾತ್ರಿ ಈ ಘಟನೆ ನಡೆದಿರುವುದನ್ನು ನೋಡಿದರೆ ಕಿಡಿಗೇಳಿಗಳಿಗೆ ಸರ್ಕಾರದ ಕಾನೂನಿನಲ್ಲಿ, ನಾಯಕರ ಮೇಲೆ ಭಯವಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ವಿಧಾನ ಸೌಧದಲ್ಲಿ ವಿರೋಧ ಪಕ್ಷದ ಉಪ ನಾಯಕ ಯು ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ. ಯಾರದ್ದೋ ತಪ್ಪಿಗೆ ಮುಗ್ಧರಿಗೆ ಅನ್ಯಾಯವಾಗಬಾರದು. ಕೂಡಲೇ ಕೊಲೆ ಆರೋಪಿಗಳನ್ನು ಬಂಧನ ಮಾಡಬೇಕು, ಕೊಲೆಗಾರರನ್ನು ತಕ್ಷಣ ಪತ್ತೆಹಚ್ಚಿ ಶಿಕ್ಷೆಯಾಗುವ ಕೆಲಸವನ್ನು ಸರ್ಕಾರ ಕೂಡಲೇ ಮಾಡಬೇಕು ಎಂದು ಒತ್ತಾಯಿಸಿದರು.
ಕೊಲೆ ಪ್ರಕರಣದಲ್ಲಿ ಯಾರಿದ್ದಾರೋ ಕೂಡಲೇ ಬಂಧಿಸಲಿ. ಈ ಪ್ರಕರಣಕ್ಕೆ ಬೇರೆ-ಬೇರೆ ತಿರುವು ನೀಡುವುದು ಬೇಡ, ಸರ್ಕಾರ ಬಿಗಿ ಕ್ರಮ ಕೈಗೊಳ್ಳದೇ ಇದ್ದರೆ ಕಷ್ಟ. ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…