ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಕಗ್ಗೊಲೆಯಾಗಿರುವ ಘಟನೆಯನ್ನು ಖಂಡಿಸುತ್ತೇನೆ, ಆಡಳಿತ ಪಕ್ಷದ ಹಿರಿಯ ನಾಯಕರು ಇರುವಂತಹ ಜಿಲ್ಲೆಯಲ್ಲಿ ರಾತ್ರೋರಾತ್ರಿ ಈ ಘಟನೆ ನಡೆದಿರುವುದನ್ನು ನೋಡಿದರೆ ಕಿಡಿಗೇಳಿಗಳಿಗೆ ಸರ್ಕಾರದ ಕಾನೂನಿನಲ್ಲಿ, ನಾಯಕರ ಮೇಲೆ ಭಯವಿಲ್ಲ ಎಂಬುದು ಸ್ಪಷ್ಟವಾಗುತ್ತಿದೆ ಎಂದು ವಿಧಾನ ಸೌಧದಲ್ಲಿ ವಿರೋಧ ಪಕ್ಷದ ಉಪ ನಾಯಕ ಯು ಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕೆಲಸ. ಯಾರದ್ದೋ ತಪ್ಪಿಗೆ ಮುಗ್ಧರಿಗೆ ಅನ್ಯಾಯವಾಗಬಾರದು. ಕೂಡಲೇ ಕೊಲೆ ಆರೋಪಿಗಳನ್ನು ಬಂಧನ ಮಾಡಬೇಕು, ಕೊಲೆಗಾರರನ್ನು ತಕ್ಷಣ ಪತ್ತೆಹಚ್ಚಿ ಶಿಕ್ಷೆಯಾಗುವ ಕೆಲಸವನ್ನು ಸರ್ಕಾರ ಕೂಡಲೇ ಮಾಡಬೇಕು ಎಂದು ಒತ್ತಾಯಿಸಿದರು.
ಕೊಲೆ ಪ್ರಕರಣದಲ್ಲಿ ಯಾರಿದ್ದಾರೋ ಕೂಡಲೇ ಬಂಧಿಸಲಿ. ಈ ಪ್ರಕರಣಕ್ಕೆ ಬೇರೆ-ಬೇರೆ ತಿರುವು ನೀಡುವುದು ಬೇಡ, ಸರ್ಕಾರ ಬಿಗಿ ಕ್ರಮ ಕೈಗೊಳ್ಳದೇ ಇದ್ದರೆ ಕಷ್ಟ. ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…