Featured

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ , ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ; ಶಾಲಾ-ಕಾಲೇಜುಗಳಿಗೆ ರಜೆ  – Vishwanews24

ಶಿವಮೊಗ್ಗ : ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ , ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ; ಶಾಲಾ-ಕಾಲೇಜುಗಳಿಗೆ ರಜೆ  – Vishwanews24

ಶಿವಮೊಗ್ಗ:  ಜಿಲ್ಲೆಯಲ್ಲಿ ಈಗ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆಯಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.

ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದೆ. ಪರಿಣಾಮ, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ(ಸಿಆರ್‌ಪಿಸಿ ಸೆಕ್ಷನ್‌ 144) ಜಾರಿಗೊಳಿಸಲಾಗಿದೆ. ಕಳೆದ ರಾತ್ರಿ 9 ಗಂಟೆಯ ಸುಮಾರಿಗೆ ಹರ್ಷ ಎಂಬಾತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಚುಚ್ಚಿ ಕೃತ್ಯ ಎಸಗಿ ಪರಾರಿಯಾಗಿದ್ದಾರೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಯುವಕನನ್ನು ತಕ್ಷಣ ದಾಖಲಾಯಿಸಿತಾದರೂ ಅಷ್ಟೊತ್ತಿಗೆ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಸಾವಿರಾರು ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಕಳೆದ ರಾತ್ರಿ ಆಗಿದ್ದೇನು?: ನಿನ್ನೆ ಭಾನುವಾರ ರಾತ್ರಿ 10 ಗಂಟೆ ಸುಮಾರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಭಾರತಿ ಕಾಲೊನಿ ಬಡಾವಣೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದರು.

ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಭಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ. ಕೂಡಲೇ ಯುವಕನನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿಸಿತಾದರೂ ಚಿಕಿತ್ಸೆ ಫಲಿಸದೇ ಹರ್ಷ ಪ್ರಾಣಬಿಟ್ಟಿದ್ದಾನೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

3 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

5 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

6 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

6 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

6 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

6 hours ago