Featured

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ

ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು ಆನೆಗಳ ನಡುವಿನ ಕಾದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಸಿಕ್ಕಿಹಾಕಿಕೊಂಡು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಪ್ರವಾಸಿಗ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆ (ಮೇ 22)ಯಿಂದ ತಾತ್ಕಾಲಿಕವಾಗಿ ಪ್ರವೇಶವನ್ನು ನಿಷೇಧಿಸಲು ಅರಣ್ಯ ಇಲಾಖೆ ಮುಂದಾಗಿದೆ.

ಕೆಲ ದಿನಗಳ ಹಿಂದೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಆನೆಗಳ ನಡುವಿನ ಗುದ್ದಾಟದ ಸಂದರ್ಭದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆ ಜುನೆಸ್ಸಿ(33) ಎಂಬವವರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ಆನೆ ಬಿಡಾರಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾಗಿರುವ ಸಕ್ರೆಬೈಲು ಆನೆ ಬಿಡಾರಕ್ಕೆ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಯಿಂದ ಆನೆಗಳನ್ನು ನೋಡಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಬಂದಂತಹ ಪ್ರವಾಸಿಗರು ಆನೆಗಳಿಗೆ ಸ್ನಾನ ಮಾಡಿಸುವುದು ಮತ್ತು ಅವುಗಳನ್ನು ಮುಟ್ಟುವುದು ಮಾಡುತ್ತಾರೆ. ದುಬಾರೆ ಆನೆ ಬಿಡಾರದ ದುರಂತದ ನಂತರ ಆನೆಗಳಿಗೆ ಸ್ನಾನ ಮಾಡಿಸುವ ವ್ಯವಸ್ಥೆ ಬಂದ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದುಬಾರೆಯಲ್ಲಿ ನಡೆದ ಘಟನೆ ಸಕ್ರೆಬೈಲು ಆನೆ ಬಿಡಾರದಲ್ಲಿ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಮಹತ್ವದ ನಿರ್ಧಾರವನ್ನು ಅರಣ್ಯ ಇಲಾಖೆ ಕೈಗೊಂಡಿದೆ.

ಸಕ್ರೆಬೈಲು ಆನೆ ಬಿಡಾರವು ಇಂದಿನಿಂದಲೇ ಮುಚ್ಚಬೇಕಿತ್ತು. ಆದರೆ ಇಂದು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ ನಾಳೆಯಿಂದ ಕೆಲ ದಿನಗಳ ಕಾಲ ತಾತ್ಕಾಲಿಕವಾಗಿ ಬಂದ್ ಆಗಿರಲಿದೆ.

ಸದ್ಯ ಸಕ್ರೆಬೈಲು ಆನೆ ಬಿಡಾರದಲ್ಲಿ 24 ಆನೆಗಳು ಇವೆ. 19 ಗಂಡು ಆನೆಗಳು ಐದು ಹೆಣ್ಣು ಆನೆಗಳು ಇವೆ. ಆನೆಗಳಿಗೆ ಸ್ನಾನ ಮಾಡಿಸುವ ಜಾಗದಿಂದ 50 ಮೀಟರ್ ದೂರದಲ್ಲಿ ಆನೆಗಳನ್ನು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago