ಶಿವಮೊಗ್ಗ: ಸಾಗರದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಶಿವಮೊಗ್ಗದ ಎಸ್ಪಿ ಜಿ.ಕೆ.ಮಿಥುನ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಿಥುನ್ ಕುಮಾರ್, ವೈಯಕ್ತಿಕ ವಿಚಾರವಾಗಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಹಲ್ಲೆ ಮಾಡಿದ್ದಾನೆ. ತಂಗಿಯನ್ನು ಸುನೀಲ್ ಚುಡಾಯಿಸಿದ್ದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. 4-5 ತಿಂಗಳಿನಿಂದ ಸಮೀರ್ ತಂಗಿಯನ್ನು ಚುಡಾಯಿಸಿದ್ದ ಆರೋಪ ಮಾಡಿದ್ದಾನೆ ಎಂದಿದ್ದಾರೆ.
ಸಮೀರ್ ತಂಗಿಯ ಫೋನ್ ನಂಬರ್ ಕೇಳಿದ್ದ. ಇದೇ ವಿಚಾರವಾಗಿ ಸುನೀಲ್ ಹಾಗೂ ಸಮೀರ್ ನಡುವೆ ಗಲಾಟೆ ಆಗಿತ್ತು. ನಿನ್ನೆ ಮೇಕೆಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಸಮೀರ್, ಸುನೀಲ್ ನನ್ನು ನೋಡಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿಸಿದ್ದಾರೆ.
ದಾಳಿಯ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬೇರೆ ಯಾರಾದರೂ ಪ್ರಕರಣದಲ್ಲಿ ಇದ್ದಾರೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸುನಿಲ್, ಸಮೀರ್ ಸಹೋದರಿಗೆ ಚುಡಾಯಿಸಿರುವ ಕಾಲ್ ರೆಕಾರ್ಡ್ಸ್ ಲಭ್ಯವಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಜಿ.ಕೆ.ಮಿಥುನ್ ಹೇಳಿದ್ದಾರೆ.
ಸಾಗರ ನಗರದ ಬಿ.ಎಚ್.ರಸ್ತೆಯ ಬಸ್ ನಿಲ್ದಾಣ ಬಳಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಮಚ್ಚು ಬೀಸಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ದಾಳಿಯಿಂದ ಸುನೀಲ್ ಪಾರಾಗಿದ್ದ. ದಾಳಿಗೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…