ಶಿವಮೊಗ್ಗ : ಜಿಲ್ಲೆಯ ಹುಣಸೋಡಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅಧಿಕಾರಿಗಳೋಂದಿಗೆ ಹುಣಸೋಡು ಗ್ರಾಮದ ಕ್ವಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಗುರುವಾರ ರಾತ್ರಿ ನಡೆದ ದುರ್ಘಟನೆಯಲ್ಲಿ 6 ಜನ ಮೃತಪಟ್ಟಿದ್ದು, ಮೃತರಿಗೆ ಸರಕಾರದಿಂದ ಐದು ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದೇವೆ. ಸ್ಫೋಟಕಗಳ ಬಗ್ಗೆ ಹೈದ್ರಾಬಾದ್ ತಂಡ ಪರಿಶೀಲನೆಯನ್ನು ಮಾಡಿದೆ. ಜೊತೆಗೆ ಡಿಸಿ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದಲೂ ತನಿಖೆಯಾಗುತ್ತಿದೆ. ಸ್ಫೋಟಕಗಳ ಮಾರಾಟ, ಬಳಕೆ ಆಯಾಮದಲ್ಲೂ ಇನ್ನಷ್ಟು ತನಿಖೆ ಮಾಡಬೇಕಿದೆ ಎಂದರು.
ಘಟನೆ ನಡೆದಿರುವ ಈ ಭಾಗದ ಎಲ್ಲಾ ಕ್ರಷರ್ ಗಳು ಸರ್ಕಾರದ ಅನುಮತಿ ಪಡೆದಿವೆ. ಆದರೆ ಕ್ರಷರ್ ಗಳಲ್ಲಿ ಕ್ವಾರಿ ನಡೆಸಲು ಯಾವುದೇ ಅನುಮತಿಯಲ್ಲ. ಎಕೋ ಸೆನ್ಸಿಟಿವ್ ಝೋನ್ ಆಗಿರುವುದರಿಂದ ಪ್ರಕರಣದ ಮರು ಪರಿಶೀಲನೆ ಬಗ್ಗೆ ಪ್ರಸ್ತಾವ ಬಂದಿದ್ದು, ಈ ಕುರಿತು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…