ಶಿವಮೊಗ್ಗ : ಜಿಲ್ಲೆಯ ಹುಣಸೋಡಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅಧಿಕಾರಿಗಳೋಂದಿಗೆ ಹುಣಸೋಡು ಗ್ರಾಮದ ಕ್ವಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಗುರುವಾರ ರಾತ್ರಿ ನಡೆದ ದುರ್ಘಟನೆಯಲ್ಲಿ 6 ಜನ ಮೃತಪಟ್ಟಿದ್ದು, ಮೃತರಿಗೆ ಸರಕಾರದಿಂದ ಐದು ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದೇವೆ. ಸ್ಫೋಟಕಗಳ ಬಗ್ಗೆ ಹೈದ್ರಾಬಾದ್ ತಂಡ ಪರಿಶೀಲನೆಯನ್ನು ಮಾಡಿದೆ. ಜೊತೆಗೆ ಡಿಸಿ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದಲೂ ತನಿಖೆಯಾಗುತ್ತಿದೆ. ಸ್ಫೋಟಕಗಳ ಮಾರಾಟ, ಬಳಕೆ ಆಯಾಮದಲ್ಲೂ ಇನ್ನಷ್ಟು ತನಿಖೆ ಮಾಡಬೇಕಿದೆ ಎಂದರು.
ಘಟನೆ ನಡೆದಿರುವ ಈ ಭಾಗದ ಎಲ್ಲಾ ಕ್ರಷರ್ ಗಳು ಸರ್ಕಾರದ ಅನುಮತಿ ಪಡೆದಿವೆ. ಆದರೆ ಕ್ರಷರ್ ಗಳಲ್ಲಿ ಕ್ವಾರಿ ನಡೆಸಲು ಯಾವುದೇ ಅನುಮತಿಯಲ್ಲ. ಎಕೋ ಸೆನ್ಸಿಟಿವ್ ಝೋನ್ ಆಗಿರುವುದರಿಂದ ಪ್ರಕರಣದ ಮರು ಪರಿಶೀಲನೆ ಬಗ್ಗೆ ಪ್ರಸ್ತಾವ ಬಂದಿದ್ದು, ಈ ಕುರಿತು ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…