ಶಿವಮೊಗ್ಗ : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆಯು ಎನ್ ಐಎ ತನಿಖೆಗೆ ವಹಿಸಿದೆ.
ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಸುಪರ್ದಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವೆ, ಶಿವಮೊಗ್ಗ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಎನ್ ಐಎ ಯು ನಂಬಿಕಸ್ಥ ಏಜೆನ್ಸಿಯಾಗಿದ್ದು, ಎನ್ಐಎ ತನಿಖೆಗೊಪ್ಪಿಸಿದರೆ ಹರ್ಷ ಕುಟುಂಬಸ್ಥರಿಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಗೃಹ ಇಲಾಖೆಯು ಈ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸಿದೆ. ರಾಷ್ಟ್ರೀಯ ತನಿಖಾ ದಳವು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲು ಮಾಡಿಕೊಂಡಿದ್ದು, ಶೀಘ್ರ ತನಿಖೆ ಆರಂಭವಾಗಲಿದೆ.
ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷನ ಮೇಲೆ ದುಷ್ಕರ್ಮಿಗಳು ಫೆಬ್ರವರಿ 20 ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ನಡೆಸಿದ್ದರು. ಈ ಪ್ರಕರಣವು ರಾಜ್ಯಾದ್ಯಂತ ಸಾಕಷ್ಟು ಸುದ್ದಿ ಮಾಡಿದ್ದಲ್ಲದೆ, ಆರೋಪಿಗಳ ಶೀಘ್ರ ಪತ್ತೆಗಾಗಿ ಹಿಂದೂಪರ ಸಂಘಟನೆಗಳು, ಜನಸಾಮಾನ್ಯರು ಒತ್ತಾಯಿಸಿದ್ದರು. ಅಲ್ಲದೆ, ಹರ್ಷ ಕೊಲೆ ಹಿನ್ನೆಲೆಯಲ್ಲಿ ಶಿವಮೊಗ್ಗ ಬಂದ್ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಲಾಗಿತ್ತು.
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…