Featured

ಶಿವಮೊಗ್ಗ: ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು ; ಶಾಲೆ ಬಿಡುತ್ತೇವೆ ಆದ್ರೆ ಹಿಜಾಬ್‌ ತೆಗೆಯೊಲ್ಲ – Vishwanews24

ಶಿವಮೊಗ್ಗ: ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು ; ಶಾಲೆ ಬಿಡುತ್ತೇವೆ ಆದ್ರೆ ಹಿಜಾಬ್‌ ತೆಗೆಯೊಲ್ಲ – Vishwanews24

ಶಿವಮೊಗ್ಗ: ʻಹಿಜಾಬ್‌ʼ ಕಾವು ರಾಜ್ಯದಲ್ಲಿ ಹೆಚ್ಚಾಗಿದೆ. ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಹಿಜಾಬ್‌ ಧರಿಸಿ ಶಾಲೆಗೆ ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ.

ಇಂದು ಇಂಗ್ಲೀಷ್‌ ಮತ್ತು ಸೈನ್ಸ್‌ ಪರೀಕ್ಷೆ ಇತ್ತು.ಹಿಜಾಬ್‌ ಧರಿಸಿದ್ದಕ್ಕೆ ಎಕ್ಸಾಂಗೆ ಅವಕಾಶ ಕೊಟ್ಟಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ವಿದ್ಯಾರ್ಥಿನಿಯರು ಎಕ್ಸಾಂಗಿಂತ ಹಿಜಾಬ್‌ ಮುಖ್ಯ ಅಂತ ಹೇಳಿ ಪರೀಕ್ಷೆ ಬರೆಯದೇ ಮನೆಗೆ ಹೋಗಿದ್ದಾರೆ.

ನಾವು ಹಿಜಾಬ್‌ ಧರಿಸಿಯೇ ಶಾಲೆಗೆ ಹೋಗುತ್ತೇವೆ. ಪೋಷಕು ಹಿಜಾಬ್‌ ತೆಗೆಯಬೇಡ ಎಂದಿದ್ದಾರೆ. ಇಷ್ಟು ವರ್ಷ ಹಿಜಾಬ್‌ ತೆಗೆಯಲು ಸೂಚಿಸಿಲ್ಲ. ಆದರೆ ಇಂದು ಹಿಜಾಬ್‌ ತೆಗೆಯಿರಿ ಅಂದ್ರೆ ಹೇಗೆ ತೆಗೆಯೋದು. ಇಸ್ಲಾಂ ಧರ್ಮದಲ್ಲಿ ಹಿಜಾಬ್‌ ತೆಗೆಯಲು ಅವಕಾಶವಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಶಾಲೆ ಬಿಡುತ್ತೇವೆ ಆದ್ರೆ ಹಿಜಾಬ್‌ ತೆಗೆಯೊಲ್ಲ. ನಮಗೆ ಧರ್ಮ ಬೇಕು ಶಾಲೆ ಬೇಡವೇ ಬೇಡ ಎಂದು ಇಲ್ಲಿನ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ :

ಇಂದು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಆದರೆ ಶಿವಮೊಗ್ಗದಲ್ಲಿ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.ಶಿವಮೊಗ್ಗದ ಮೇನ್ ಮಿಡ್ಲ್ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಇಂದು ಶಾಲೆಗೆ ಪರೀಕ್ಷೆ ಬರೆಯಲು 13 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು.ಆದರೆ ಶಿಕ್ಷಕರು ಹಿಜಾಬ್ ಧರಿಸಿ ಬರೆಯಲು ಅವಕಾಶ ನೀಡಲಿಲ್ಲ.ಅದಕ್ಕೆ ವಿದ್ಯಾರ್ಥಿನಿಯರು ‘ನಮಗೆ ಪೋಷಕರು ಹಿಜಾಬ್ ತೆಗೆಯದಂತೆ ಹೇಳಿದ್ದಾರೆ.ಹಾಗಾಗಿ ತೆಗೆಯುವುದಿಲ್ಲ’ ಎಂದು ಪಟ್ಟು ಹಿಡಿದಿದ್ದಾರೆ.ನಂತರ ಹಿಜಾಬ್ ಧರಿಸಲು ಶಿಕ್ಷಕರು ಅವಕಾಶ ನೀಡಲಿಲ್ಲ.ಹಾಗಾಗಿ ವಿದ್ಯಾರ್ಥಿನಿಯರು ಪೋಷಕರನ್ನು ಕರೆಸಿ ಮನೆಗೆ ಕಳಿಸಿದರು.

ಹಿಜಾಬ್- ಕೇಸರಿ ವಿವಾದ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯತ್ತಿದೆ, ತೀರ್ಪು ಬರುವವರೆಗೆ ಧಾರ್ಮಿಕ ಉಡುಗೆಯನ್ನು ಶಾಲೆ ಕಾಲೇಜಿಗೆ ತೊಡುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಇದನ್ನೂ ಓದಿ :

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

21 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

22 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

23 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

23 hours ago