Featured

ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಸರ್ಜಿ ಹೆಸರಿನಲ್ಲಿ ವಿಷಪೂರಿತ ಸ್ವೀಟ್‌ ಬಾಕ್ಸ್‌ ಕಳುಹಿಸಿದ ದುಷ್ಕರ್ಮಿಗಳು – vishwanews24

ಹೊಸ ವರ್ಷಾಚರಣೆಯಂದು ಡಾ.ಧನಂಜಯ ಸರ್ಜಿ ಹೆಸರಿನಲ್ಲಿ ವಿಷಯುಕ್ತ ಸ್ವೀಟ್‌ ಬಾಕ್ಸ್‌ ರವಾನೆ ; ದೂರು ದಾಖಲು

ಶಿವಮೊಗ್ಗ: ಹೊಸ ವರ್ಷಾಚರಣೆಯಂದು ಬಿಜೆಪಿ ಎಂಎಲ್‌ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್‌ಗಳನ್ನು ಮೂವರಿಗೆ ಕಳುಹಿಸಿದ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸಿಹಿತಿಂಡಿಗಳ ಬಾಕ್ಸ್ ಸ್ವೀಕರಿಸಿದ ಮೂವರಲ್ಲಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್ ಎನ್ ನಾಗರಾಜ್ ಸಹ ಒಬ್ಬರಾಗಿದ್ದಾರೆ. ಜನವರಿ 1ರಂದು ಅಜ್ಞಾತ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, ಡಿಟಿಡಿಸಿ ಕೊರಿಯರ್ ಮೂಲಕ ಹೊಸ ವರ್ಷದ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿಗಳ ಬಾಕ್ಸ್ ಕಳುಹಿಸಿದ್ದಾರೆ.

ಬಾಕ್ಸ್ ಸ್ವೀಕರಿಸಿದ ನಾಗರಾಜ್ ಅವರು ಸಿಹಿತಿಂಡಿಗಳನ್ನು ಸೇವಿಸಿದ್ದಾಗ ಅದು ತೀವ್ರ ಕಹಿಯಾಗಿತ್ತು. ಕೂಡಲೇ ನಾಗರಾಜ್ ಅವರು ಡಾ.ಸರ್ಜಿ ಅವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಸರ್ಜಿ ತಾನು ಯಾರಿಗೂ ಸಿಹಿತಿಂಡಿಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಗ ಇದು ಅವರ ಹೆಸರಿನಲ್ಲಿ ಬೇರೆ ಯಾರೋ ಕಳುಹಿಸಲಾದ ಸಿಹಿತಿಂಡಿಗಳಾಗಿದ್ದು, ವಿಷಕಾರಿ ಪದಾರ್ಥ ಕಲಬೆರಕೆ ಮಾಡಿರಬಹುದು ಎಂಬ ಅನುಮಾನವನ್ನು ಹುಟ್ಟುಹಾಕಿದೆ.ಸಿಹಿತಿಂಡಿ ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಕೋಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಹೆಚ್ಚಿನ ತನಿಖೆಗಾಗಿ ಪೊಲೀಸರು ಸಿಹಿತಿಂಡಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದೇ ರೀತಿಯ ಸಿಹಿತಿಂಡಿಯನ್ನು ಅರವಿಂದ್ ಮತ್ತು ಪವಿತ್ರಾ ಎಂಬ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ. ಭದ್ರಾವತಿಯಿಂದ ಕೊರಿಯರ್ ಕಳುಹಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

5 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

5 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago