ಶಿವರಾತ್ರಿ ಆಚರಣೆಗೆ ಸ್ವರ್ಣ ಬಣ್ಣದೊಂದಿಗೆ ಸಜ್ಜಾದ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ -Vishwanews24

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಸಂಪೂರ್ಣ ಸ್ವರ್ಣ ಬಣ್ಣದೊಂದಿಗೆ ಕಂಗೊಳಿಸಿ, ಶಿವರಾತ್ರಿ ಆಚರಣೆಗೆ ಸಜ್ಜಾಗಿದೆ.
ಕಳೆದ ನವರಾತ್ರಿ ಉತ್ಸವ ಸಂದರ್ಭ ಆರಂಭಿಸಲಾಗಿದ್ದ ದೇವಾಲಯವನ್ನು ಸಂಪೂರ್ಣ ಸ್ವರ್ಣ ಬಣ್ಣದಲ್ಲಿ ಅಲಂಕರಿಸುವ ಕಾರ್ಯ ಪೂರ್ಣಗೊಂಡಿದೆ ಎಂದು ಕ್ಷೇತ್ರದ ನವೀಕರಣ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ  ತಿಳಿಸಿದರು.

ದೇವಸ್ಥಾನದ ಧ್ವಜಸ್ತಂಭ ಕೂಡ ಸ್ವರ್ಣ ಬಣ್ಣ ಹೊಂದಿರುವುದು ಕುದ್ರೋಳಿ ಕ್ಷೇತ್ರದ ವಿಶೇಷ. ಈ ಬಾರಿ ಶಿವರಾತ್ರಿ ಉತ್ಸವ ಸಂದರ್ಭ ದೇವಸ್ಥಾನದ ಪರಿವಾರ ದೇವರುಗಳ ಮಂದಿರಗಳನ್ನು ಕೂಡ ಸ್ವರ್ಣ ಬಣ್ಣದಿಂದ ಸುಂದರಗೊಳಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಶಬರಿಮಲೆಯಲ್ಲಿ ಅಯ್ಯಪ್ಪನ ಮಂದಿರ, ಅಮೃತಸರದಲ್ಲಿ ಗುರುನಾನಕ್ ಮಂದಿರ ಗೋಲ್ಡನ್ ಟೆಂಪಲ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದೆ. ಚೆನ್ನೈನಲ್ಲಿ ಸ್ವಾಮೀಜಿಯೊಬ್ಬರು ನೀರಿನ ಮಧ್ಯದಲ್ಲಿ ಸ್ವರ್ಣ ಮಂದಿರ ನಿರ್ಮಿಸಿದ್ದಾರೆ. ಅಲ್ಲಿಗೆ ಭೇಟಿ ನೀಡಿದ್ದೆ. ಅದರಂತೆ ಕುದ್ರೋಳಿ ಕ್ಷೇತ್ರ ಕೂಡ ಸ್ವರ್ಣ ಬಣ್ಣದಿಂದ ಭಕ್ತರ ಕಣ್ಮನ ಸೆಳೆಯಲಿದೆ ಎಂದರು.

ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಸದಸ್ಯರಾದ ರವಿಶಂಕರ್ ಮಿಜಾರ್, ಮಹೇಶ್ಚಂದ್ರ, ದೇವೇಂದ್ರ ಪೂಜಾರಿ, ಡಾ.ಬಿ.ಜಿ.ಸುವರ್ಣ, ಪ್ರಮುಖರಾದ ಡಾ.ಅನಸೂಯ ಸಾಲ್ಯಾನ್, ಚಿತ್ತರಂಜನ್ ಗರೋಡಿ, ಶೇಖರ ಪೂಜಾರಿ, ದೇವೇಂದ್ರ ಪೂಜಾರಿ, ಕರುಣಾಕರ ಶೆಟ್ಟಿ , ಎಸ್.ಜಯವಿಕ್ರಮ್, ಮೋಹನ್ ಶೆಟ್ಟಿ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.

ಕ್ಷೇತ್ರಾಡಳಿತ ಮಂಡಳಿ ಕೋಶಾಧಿ ಕಾರಿ, ನ್ಯಾಯವಾದಿ ಪದ್ಮರಾಜ್‌ ಆರ್‌. ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಶಿವರಾತ್ರಿ ಉತ್ಸವದ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಫೆ. 23ರವರೆಗೆ ಆಚರಣೆ ನಡೆಯಲಿದೆ. ಫೆ. 21ರಂದು ರಾತ್ರಿ 1 ಗಂಟೆಗೆ ಮಹಾಶಿವರಾತ್ರಿ ಜಾಗರಣೆ ಬಲಿ ನಡೆಯಲಿದೆ. ಫೆ. 22ರಂದು ಮಧ್ಯಾಹ್ನ 1 ಗಂಟೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದರು.

 

Vishwa News 24

Recent Posts

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

2 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

19 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

28 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

1 hour ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

1 hour ago