ಶಿವರಾತ್ರಿ ಆಚರಣೆಗೆ ಸ್ವರ್ಣ ಬಣ್ಣದೊಂದಿಗೆ ಸಜ್ಜಾದ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ -Vishwanews24

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಸಂಪೂರ್ಣ ಸ್ವರ್ಣ ಬಣ್ಣದೊಂದಿಗೆ ಕಂಗೊಳಿಸಿ, ಶಿವರಾತ್ರಿ ಆಚರಣೆಗೆ ಸಜ್ಜಾಗಿದೆ.
ಕಳೆದ ನವರಾತ್ರಿ ಉತ್ಸವ ಸಂದರ್ಭ ಆರಂಭಿಸಲಾಗಿದ್ದ ದೇವಾಲಯವನ್ನು ಸಂಪೂರ್ಣ ಸ್ವರ್ಣ ಬಣ್ಣದಲ್ಲಿ ಅಲಂಕರಿಸುವ ಕಾರ್ಯ ಪೂರ್ಣಗೊಂಡಿದೆ ಎಂದು ಕ್ಷೇತ್ರದ ನವೀಕರಣ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ  ತಿಳಿಸಿದರು.

ದೇವಸ್ಥಾನದ ಧ್ವಜಸ್ತಂಭ ಕೂಡ ಸ್ವರ್ಣ ಬಣ್ಣ ಹೊಂದಿರುವುದು ಕುದ್ರೋಳಿ ಕ್ಷೇತ್ರದ ವಿಶೇಷ. ಈ ಬಾರಿ ಶಿವರಾತ್ರಿ ಉತ್ಸವ ಸಂದರ್ಭ ದೇವಸ್ಥಾನದ ಪರಿವಾರ ದೇವರುಗಳ ಮಂದಿರಗಳನ್ನು ಕೂಡ ಸ್ವರ್ಣ ಬಣ್ಣದಿಂದ ಸುಂದರಗೊಳಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಶಬರಿಮಲೆಯಲ್ಲಿ ಅಯ್ಯಪ್ಪನ ಮಂದಿರ, ಅಮೃತಸರದಲ್ಲಿ ಗುರುನಾನಕ್ ಮಂದಿರ ಗೋಲ್ಡನ್ ಟೆಂಪಲ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದೆ. ಚೆನ್ನೈನಲ್ಲಿ ಸ್ವಾಮೀಜಿಯೊಬ್ಬರು ನೀರಿನ ಮಧ್ಯದಲ್ಲಿ ಸ್ವರ್ಣ ಮಂದಿರ ನಿರ್ಮಿಸಿದ್ದಾರೆ. ಅಲ್ಲಿಗೆ ಭೇಟಿ ನೀಡಿದ್ದೆ. ಅದರಂತೆ ಕುದ್ರೋಳಿ ಕ್ಷೇತ್ರ ಕೂಡ ಸ್ವರ್ಣ ಬಣ್ಣದಿಂದ ಭಕ್ತರ ಕಣ್ಮನ ಸೆಳೆಯಲಿದೆ ಎಂದರು.

ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಕಾರ್ಯದರ್ಶಿ ಬಿ.ಮಾಧವ ಸುವರ್ಣ, ಸದಸ್ಯರಾದ ರವಿಶಂಕರ್ ಮಿಜಾರ್, ಮಹೇಶ್ಚಂದ್ರ, ದೇವೇಂದ್ರ ಪೂಜಾರಿ, ಡಾ.ಬಿ.ಜಿ.ಸುವರ್ಣ, ಪ್ರಮುಖರಾದ ಡಾ.ಅನಸೂಯ ಸಾಲ್ಯಾನ್, ಚಿತ್ತರಂಜನ್ ಗರೋಡಿ, ಶೇಖರ ಪೂಜಾರಿ, ದೇವೇಂದ್ರ ಪೂಜಾರಿ, ಕರುಣಾಕರ ಶೆಟ್ಟಿ , ಎಸ್.ಜಯವಿಕ್ರಮ್, ಮೋಹನ್ ಶೆಟ್ಟಿ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.

ಕ್ಷೇತ್ರಾಡಳಿತ ಮಂಡಳಿ ಕೋಶಾಧಿ ಕಾರಿ, ನ್ಯಾಯವಾದಿ ಪದ್ಮರಾಜ್‌ ಆರ್‌. ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಶಿವರಾತ್ರಿ ಉತ್ಸವದ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಫೆ. 23ರವರೆಗೆ ಆಚರಣೆ ನಡೆಯಲಿದೆ. ಫೆ. 21ರಂದು ರಾತ್ರಿ 1 ಗಂಟೆಗೆ ಮಹಾಶಿವರಾತ್ರಿ ಜಾಗರಣೆ ಬಲಿ ನಡೆಯಲಿದೆ. ಫೆ. 22ರಂದು ಮಧ್ಯಾಹ್ನ 1 ಗಂಟೆಗೆ ಮಹಾ ಅನ್ನಸಂತರ್ಪಣೆ ನಡೆಯಲಿದೆ ಎಂದರು.

 

Vishwa News 24

Recent Posts

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

4 minutes ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

8 minutes ago

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

24 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

46 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

21 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago