Featured

ಶಿವಸೇನೆ ಇಲ್ಲಾಂದ್ರೆ ಏಕಾಂಗಿಯಾಗಿ ಹೋರಾಡಲು ಸಿದ್ಧರಾಗಿ: ಅಮಿತ್ ಶಾ ಕರೆ

ಮುಂಬೈ: ಶಿವಸೆನೆ ಜತೆಗೆ ಮೈತ್ರಿ ಕಷ್ಟವಾಗಿರುವ ಹಿನ್ನಲೆಯಲ್ಲಿ ತಮ್ಮ ಪಕ್ಷದ ನಾಯಕರಿಗೆ 2019 ರ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರೆಕೊಟ್ಟಿದ್ದಾರೆ.

ಶಿವಸೇನೆಯನ್ನು ನಂಬುತ್ತಾ ಕೂತರೆ ಇನ್ನು ಮಹಾರಾಷ್ಟ್ರದಲ್ಲಿ ಪ್ರಚಾರ ಕಷ್ಟ ಎಂದು ಬಿಜೆಪಿಗೆ ಈಗ ಅರಿವಾಗಿದೆ. ಅವಿಶ್ವಾಸ ಮತ ಸಂದರ್ಭದಲ್ಲಿಯೂ ಶಿವಸೇನೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲು ಕರೆ ಕೊಟ್ಟಿದ್ದಾರೆ.

ಶಿವಸೇನೆ ಬಂದರೆ ಸ್ವಾಗತ. ಇಲ್ಲವಾದರೆ ಏಕಾಂಗಿಯಾಗಿ ಆದರೂ ಸರಿಯೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡುವಂತೆ ಅಮಿತ್ ಶಾ ಪಕ್ಷದ ನಾಯಕರಿಗೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಶಿವಸೇನೆಯ ವಿರುದ್ಧ ಏಕಾಂಗಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಬೇಕು ಎಂದು ಷಾ ಕರೆ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಬೇಕು, ಇದಕ್ಕಾಗಿ ಈಗಿಂದಲೇ ಸಜ್ಜಾಗಿ ಎಂದು ಅಮಿತ್ ಷಾ ಸೂಚಿಸಿದ್ದಾರೆ. ಬಿಜೆಪಿಯ ಯುವ ಕಾರ್ಯಕರ್ತರನ್ನೇ ಹೆಚ್ಚು ಟಾರ್ಗೆಟ್ ಮಾಡಿರುವ ಷಾ, ಪಕ್ಷದ ಮುಖಂಡರಲ್ಲಿ ಈ ಬಗ್ಗೆ ಹೆಚ್ಚು ಸಕ್ರೀಯರಾಗುವಂತೆ ಸೂಚಿಸಿದ್ದಾರೆ. ಇದಕ್ಕಾಗಿಯೇ ಷಾ ಒಟ್ಟು ೨೩ ಅಂಶಗಳ ಹೊಸ ಕಾರ್ಯ ಯೋಜನೆಯನ್ನು ತಯಾರಿಸಿದ್ದು ಯುವ ಕಾರ್ಯಕರ್ತರೊಂದಿಗೆ ಹಂಚಿಕೊಂಡಿದ್ದಾರೆ.!

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

31 minutes ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

43 minutes ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

1 hour ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

1 hour ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

1 hour ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

2 hours ago