ಮುಂಬೈ: ಶಿವಸೆನೆ ಜತೆಗೆ ಮೈತ್ರಿ ಕಷ್ಟವಾಗಿರುವ ಹಿನ್ನಲೆಯಲ್ಲಿ ತಮ್ಮ ಪಕ್ಷದ ನಾಯಕರಿಗೆ 2019 ರ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರೆಕೊಟ್ಟಿದ್ದಾರೆ.
ಶಿವಸೇನೆಯನ್ನು ನಂಬುತ್ತಾ ಕೂತರೆ ಇನ್ನು ಮಹಾರಾಷ್ಟ್ರದಲ್ಲಿ ಪ್ರಚಾರ ಕಷ್ಟ ಎಂದು ಬಿಜೆಪಿಗೆ ಈಗ ಅರಿವಾಗಿದೆ. ಅವಿಶ್ವಾಸ ಮತ ಸಂದರ್ಭದಲ್ಲಿಯೂ ಶಿವಸೇನೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲು ಕರೆ ಕೊಟ್ಟಿದ್ದಾರೆ.
ಶಿವಸೇನೆ ಬಂದರೆ ಸ್ವಾಗತ. ಇಲ್ಲವಾದರೆ ಏಕಾಂಗಿಯಾಗಿ ಆದರೂ ಸರಿಯೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡುವಂತೆ ಅಮಿತ್ ಶಾ ಪಕ್ಷದ ನಾಯಕರಿಗೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಶಿವಸೇನೆಯ ವಿರುದ್ಧ ಏಕಾಂಗಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಬೇಕು ಎಂದು ಷಾ ಕರೆ ಕೊಟ್ಟಿದ್ದಾರೆ. ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಜಯಭೇರಿ ಬಾರಿಸಬೇಕು, ಇದಕ್ಕಾಗಿ ಈಗಿಂದಲೇ ಸಜ್ಜಾಗಿ ಎಂದು ಅಮಿತ್ ಷಾ ಸೂಚಿಸಿದ್ದಾರೆ. ಬಿಜೆಪಿಯ ಯುವ ಕಾರ್ಯಕರ್ತರನ್ನೇ ಹೆಚ್ಚು ಟಾರ್ಗೆಟ್ ಮಾಡಿರುವ ಷಾ, ಪಕ್ಷದ ಮುಖಂಡರಲ್ಲಿ ಈ ಬಗ್ಗೆ ಹೆಚ್ಚು ಸಕ್ರೀಯರಾಗುವಂತೆ ಸೂಚಿಸಿದ್ದಾರೆ. ಇದಕ್ಕಾಗಿಯೇ ಷಾ ಒಟ್ಟು ೨೩ ಅಂಶಗಳ ಹೊಸ ಕಾರ್ಯ ಯೋಜನೆಯನ್ನು ತಯಾರಿಸಿದ್ದು ಯುವ ಕಾರ್ಯಕರ್ತರೊಂದಿಗೆ ಹಂಚಿಕೊಂಡಿದ್ದಾರೆ.!
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…