ಚಿತ್ರದುರ್ಗ: ಆರ್ಎಸ್ಎಸ್ ಬಗ್ಗೆ ಮಾತನಾಡೋದು ಬೆಂಕಿ ಜೊತೆ ಸರಸವಿದ್ದಂತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೊಸದುರ್ಗ ಪಟ್ಟಣದಲ್ಲಿ ಎಚ್ಚರಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕು ಸ್ಥಾಪನೆ ನೆರೆವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆಹರು ಹಾಗೂ ಇಂದಿರಾಗಾಂಧಿ ಆರ್ಎಸ್ಎಸ್ ಬಗ್ಗೆ ಮಾತನಾಡಿ ಅನುಭವಿಸಿದ್ದಾರೆ. ಹೀಗಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಹೆಚ್ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಅವರಿಗೆ ಹೇಳಲು ಬಯಸುತ್ತೇನೆ. ಆರ್ಎಸ್ಎಸ್ ಬಗ್ಗೆ ಮಾತನಾಡೋದು ಬೆಂಕಿ ಜತೆ ಸರಸವಾಡಿದಂತೆ ಎಂದು ಎಚ್ಚರಿಸಿದ್ದಾರೆ.
ರಾಮನ ಬಗ್ಗೆ ರಾವಣನಿಗೆ ಎಲ್ಲಾ ಗೊತ್ತಿತ್ತು. ಆದರೆ ಶಿವಾಜಿ ಬಗ್ಗೆ ಔರಂಗಜೇಬ್ ಗೆ ಏನೂ ಗೊತ್ತಿರಲಿಲ್ಲ. ಹೀಗಾಗಿ ಅಂದು ಶಿವಾಜಿ ಹುಟ್ಟಿಲ್ಲದಿದ್ದರೆ ಈ ದೇಶದಲ್ಲಿ ಹಿಂದೂಗಳು ಯಾರು ಸಹ ಇರುತ್ತಿರಲಿಲ್ಲ. ಹಾಗೆಯೇ ಆರ್ಎಸ್ಎಸ್ ಇಲ್ಲದಿದ್ದರೆ ಯೋಚನೆ ಮಾಡಬೇಕಿತ್ತು. ಎಂದೋ ಈ ದೇಶ ಪಾಕಿಸ್ತಾನವೋ, ಇನ್ನೊಂದೆನೋ ಆಗುತ್ತಿತ್ತು. ಆದರೆ ಮುಸ್ಲಿಂ ಮತಕ್ಕಾಗಿ ಸಿದ್ದರಾಮಯ್ಯ ಅವರು ಬಾಯಿಗೆ ಬಂದಂತೆ ಮಾತನಾಡ್ತಿದ್ದಾರೆ. ಅವರೊಂದಿಗೆ ಕ್ರೈಸ್ತರ ಸಭೆಗೆ ಹೋಗಿ ಅವರ ಸಂತೃಪ್ತಿಗೊಳಿಸಲು ಹೆಚ್ಡಿಕೆ ಸಹ ಅವರನ್ನು ಅನುಸರಿಸಿ ಕ್ರೈಸ್ತರನ್ನ ಓಲೈಸುವ ಮಾತನಾಡ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಶಿರ್ವ: ನೀರು ಪಾಲಾಗಿದ್ದ ದೈವ ನರ್ತಕನ ಮೃತದೇಹ ಪತ್ತೆ – Vishwanews24
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…