ಮಂಗಳೂರು : ಮಂಗಳೂರು ಹಾಗೂ ಬೆಂಗಳೂರು ನಡುವೆ ಪ್ರಯಾಣಕ್ಕೆ ಹೊಸ ’ವಂದೇ ಮಾತರಂ’ ರೈಲು ಆರಂಭಿಸಲಾಗುವುದು ಎಂದು ರೈಲ್ವೇ ಸಚಿವ ಪಿಯುಷ್ ಗೋಯಲ್ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಸಚಿವರು ’ವಂದೇ ಮಾತರಂ’ ಸೆಮಿ ಹೈಸ್ಪೀಡ್ ವಿಭಾಗಕ್ಕೆ ಒಳಪಟ್ಟಿದ್ದು ಮೇಕ್ ಇನ್ ಇಂಡಿಯಾ ಯೋಜನೆಯ ಅಡಿಯಲ್ಲಿ ತಯಾರಿಸಲ್ಪಟ್ಟದ್ದಾಗಿದೆ. ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸುವ ಈ ರೈಲು ಅತ್ಯಾಧುನಿಕ ಸೌಕರ್ಯಗಳನ್ನು ಒಳಗೊಂಡಿದೆ.
”ಇದು ಸ್ವದೇಶಿ ತಂತ್ರಜ್ಞಾನದಡಿ ಅಭಿವೃದ್ಧಿಯಾಗಿರುವ ಹೈ ಸ್ಪೀಡ್ ಟ್ರೈನ್ ಆಗಿದೆ” ಎಂದು ರೈಲ್ವೆ ಸಚಿವರು ತಿಳಿಸಿದರು. ಜತೆಗೆ, ”ಈ ರೈಲ್ವೆ ಮಾರ್ಗಗಳಲ್ಲಿ ಶೀಘ್ರದಲ್ಲೇ ಸ್ವಯಂಚಾಲಿತ ಸಿಗ್ನಲಿಂಗ್ ವ್ಯವಸ್ಥೆಯನ್ನು ಅಳವಡಿಸಲಾಗುವುದು” ಎಂದು ಪಿಯೂಶ್ ಗೋಯಲ್ ಮಾಹಿತಿ ನೀಡಿದರು.
“ಮೊದಲ ಬಾರಿಗೆ ಮಂಗಳೂರು-ಬೆಂಗಳೂರು-ಚೆನ್ನೈ ಹಾಗೂ ಮಂಗಳೂರು- ಹೈದರಬಾದ್ ನಗರಗಳನ್ನು ಸಂಪರ್ಕಿಸುವ ವಂದೇ ಮಾತರಂ ರೈಲು ಪ್ರಯಾಣಿಕರಿಗೆ ಹೆಚ್ಚಿನ ಉಪಕಾರಿಯಾಗಲಿದೆ. ಈ ಹೊರತು ಮುಂದಿನ ಆರು ತಿಂಗಳುಗಳಲ್ಲಿ ದೇಶದ ಹೆಚ್ಚಿನ ರೈಲು ನಿಲ್ದಾನಗಳಲ್ಲಿ ವೈ ಫೈ ಸೌಲಭ್ಯ ನೀಡಲಾಗುವುದು” ಎಂದು ಅವರು ಹೇಳಿದರು..
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…