ಮಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ನಳಿನ್ x ಮಾಡಿದ್ದು ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಕಾಸರಗೋಡು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…