ಮಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ನಳಿನ್ x ಮಾಡಿದ್ದು ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಕಾಸರಗೋಡು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…