ಶೀಘ್ರದಲ್ಲೇ ರಾಜ್ಯದ ದೇಗುಲ ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿ : ಕೋಟ ಶ್ರೀನಿವಾಸ ಪೂಜಾರಿ -Vishwanews24

Featured, ರಾಜ್ಯ ನ್ಯೂಸ್

ಶೀಘ್ರದಲ್ಲೇ ರಾಜ್ಯದ ದೇಗುಲ ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಮೈಸೂರು: “ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ದೇಗುಲ ಸಿಬ್ಬಂದಿಗೆ ಶೀಘ್ರದಲ್ಲೇ 6 ನೇ ವೇತನ ಶ್ರೇಣಿ ಜಾರಿಗೊಳಿಸಲಾಗುವುದು” ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೇಗುಲ ಸಿಬ್ಬಂದಿಗೆ 6 ನೇ ವೇತನ ಶ್ರೇಣಿ ಜಾರಿಗೆ ಕೆಲವೊಂದು ತೊಡಕಿದ್ದು, ಈಗಾಗಲೇ ಸಮಸ್ಯೆ ಪರಿಹಾರಕ್ಕೆ ಅಂತಿಮ ರೂಪ ನೀಡಿದ್ದು, ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.

ಇನ್ನು ಅರ್ಚಕರಿಗೆ ಆರೋಗ್ಯ ವಿಮೆ, ಜೀವ ವಿಮೆ ಹಾಗೂ ಪಿಂಚಣಿ ಸೌಲಭ್ಯ ಕಲ್ಪಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆಗೆ ಚರ್ಚೆ ನಡೆಸಿ ನಿರ್ಧಾರ ಪ್ರಕಟಿಸಲಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ :

ಸಿಡಿ ಪ್ರಕರಣ : ಯುವತಿ ಎಲ್ಲರ ಮುಂದೆ ಬಂದು ಸತ್ಯ ಏನೆಂದು ಹೇಳಲಿ : ಸಿದ್ದರಾಮಯ್ಯ -Vishwanews24