ಶೀಘ್ರವೇ ಗೃಹಲಕ್ಷ್ಮಿ , ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ : ಡಿಕೆ ಶಿ – vishwanews24
ನಾವು ಯಾವುದೇ ಕಾರಣಕ್ಕೂ ಹಣ ಹಾಕುವುದನ್ನು ನಿಲ್ಲಿಸಲ್ಲ : ಡಿಕೆ ಶಿವಕುಮಾರ್
ಬೆಂಗಳೂರು : ಶೀಘ್ರವೇ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
4 ತಿಂಗಳಿನಿಂದ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಜಮಾ ಆಗಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರ. ಶೀಘ್ರವೇ ಗೃಹಲಕ್ಷ್ಮಿ, ಅನ್ನಭಾಗ್ಯದ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ನಾವು ಯಾವುದೇ ಕಾರಣಕ್ಕೂ ಹಣ ಹಾಕುವುದನ್ನು ನಿಲ್ಲಿಸಲ್ಲ ಎಂದು ಅವರು ಹೇಳಿದರು.
ಗೃಹಲಕ್ಷ್ಮಿ ಯೋಜನೆಯ ಮಾಸಿಕ ಪ್ರೋತ್ಸಾಹ ಧನ ಕೂಡ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಹೆಚ್ಚುವರಿಯ ಅಕ್ಕಿಯ ಹಣ ಕೂಡ ಬಿಡುಗಡೆಯಾಗಿಲ್ಲ.
ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ – vishwanews24
