Featured

ಶೀಘ್ರವೇ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ – vishwanews24

ಶೀಘ್ರವೇ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಳಗಾವಿ : ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣವನ್ನು ಎಲ್ಲ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಇಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮತನಾಡಿದ ಅವರು, ‘ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ. ಯೋಜನೆಗೆ ಹಣ ಫಲಾನುಭವಿಗಳ ಖಾತೆಗಳಿಗೆ ಜಮಾ ಆಗಿಲ್ಲ. ಈ ಸಂಬಂಧ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದು ಶೀಘ್ರದಲ್ಲೆ ಹಣ ಜಮಾ ಮಾಡಲು ಸೂಚನೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.ಶೀಘ್ರವೇ ಜನಸೇವೆಗೆ: ‘ದೇವರ ದಯೆಯಿಂದ ಸಂಪೂರ್ಣ ಗುಣಮುಖ ಆಗಿದ್ದೇನೆ. ವೈದ್ಯರು 6 ವಾರ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವೆ. ಒಂದು ತಿಂಗಳು ತುಂಬಾ ಕಷ್ಟಕರವಾಗಿತ್ತು. ಕ್ಷೇತ್ರದ ಜನರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೆ. ಶೀಘ್ರವೇ ಜನ ಸೇವೆಗೆ ಮರಳುವೆ’ ಎಂದು ಅವರು ತಿಳಿಸಿದರು.

ನಾನು 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಎಂದ ಅವರು, ಆರು ತಿಂಗಳ ಹಿಂದೆಯೇ ಮೈಕ್ರೋ ಫೈನಾನ್ಸ್ ಸಮಸ್ಯೆ ಬಗ್ಗೆ ತಿಳಿದಿತ್ತು. ನಾನು ತಕ್ಷಣವೇ ಜಿಲ್ಲಾಧಿಕಾರಿ, ನಗರ ಪೋಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೆ, ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯವರನ್ನು ಕರೆಸಿ ಮಹಿಳೆಯರಿಗೆ ತೊಂದರೆ ನೀಡಬಾರದು ಎಂದು ಹೇಳಿದ್ದೆ ಎಂದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago