Featured

ಶೀಘ್ರವೇ ದೇಶದಲ್ಲಿ ವಾಟ್ಸ್‌ಆಪ್ ನಿಷೇಧ..?! ಶಾಕಿಂಗ್ ಕಾರಣ ಕೊಟ್ಟ ಮೋದಿ ಸರ್ಕಾರ..!

ಭಾರತದಲ್ಲಿ ಅತೀ ಹೆಚ್ಚು ಮಂದಿ ಬಳಕೆದಾರರನ್ನು ಹೊಂದಿರುವ ಮೂಲಕ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿರುವ ಫೇಸ್‌ಬುಕ್ ಮಾಲೀಕತ್ವದ ವಾಟ್ಸ್‌ಆಪ್, ಸೋಶಿಯಲ್ ಮೆಸೆಂಜಿಗ್ ಆಪ್ ಸಾಲಿನಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಆಪ್ ಶೀಘ್ರವೇ ಚೀನಾದಂತೆ ಭಾರತೀಯ ಮಾರುಕಟ್ಟೆಯಲ್ಲಿಯೂ ಬ್ಯಾನ್ ಆಗುವ ಸಾಧ್ಯತೆ ಇದೆ. ಈಗಾಗಲೇ ವಾಟ್ಸ್‌ಆಪ್ ಮೇಲೆ ನಿಯಂತ್ರಣ ಸಾಧಿಸಲು ಮುಂದಾಗಿರುವ ಸರಕಾರ, ತನ್ನ ಹಿಡಿತಕ್ಕೆ ಸಿಗದ ವಾಟ್ಸ್‌ಆಪ್ ಮೇಲೆ ನಿಷೇಧದ ದಂಡ ಪ್ರಯೋಗಕ್ಕೆ ಮುಂದಾಗಲಿದೆ ಎನ್ನಲಾಗಿದೆ.

ದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದ ಹಿಂಸಾಚಾರಕ್ಕೆ ಮತ್ತು ನಕಲಿ ಸುದ್ದಿಯನ್ನು ಹರಡಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಾಣವಾಗಲು ವಾಟ್ಸ್‌ಆಪ್ ಸಂದೇಶಗಳೇ ನೇರ ಕಾರಣ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ನಕಲಿ ಸುದ್ದಿಯನ್ನು ನಿಯಂತ್ರಿಸುವ ವಿಷಯದಲ್ಲಿ ವಾಟ್ಸ್‌ಆಪ್ ಸರಕಾರದೊಂದಿಗೆ ಸಮರ ನಡೆಸಲು ಶುರು ಮಾಡಿದೆ.

ಸುಳ್ಳು ಸುದ್ದಿ ತಡೆಗೆ: ವಾಟ್ಸ್‌ಆಪ್‌ನಿಂದಾಗಿ ಕೋಮುಗಲಭೆ, ಗುಂಪು ಹಲ್ಲೆ, ಅಮಾಯಕರ ಮೇಲೆ ದಾಳಿ, ಸುಳ್ಳು ಸುದ್ದಿ, ವ್ಯಕ್ತಿ ನಿಂದನೆ ಸೇರಿದಂತೆ ಹಲವು ಮಾದರಿಯ ತೊಂದರೆಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಅಧಿಕ ಮಂದಿ ಬಳಕೆದಾರರು ಕಣ್ಣು ಮುಚ್ಚಿ ವಾಟ್ಸ್‌ಆಪ್‌ನಲ್ಲಿ ಬರುವ ಮಾಹಿತಿಗಳನ್ನು ನಂಬುವುದು ಮತ್ತು ಅದನ್ನು ಬೇರೆಯವರಿಗೆ ಶೇರ್ ಮಾಡುತ್ತಿರುವುದು. ಈ ಹಿನ್ನಲೆಯಲ್ಲಿ ಈ ಪರಿಸ್ಥಿತಿಯನ್ನು ಸುಧಾರಿಸಲು ವಾಟ್ಸ್‌ಆಪ್‌ ಹೆಚ್ಚಿನ ಶ್ರಮ ವಹಿಸಬೇಕು ಎಂದು ಎಂದು ಕೇಂದ್ರ ಸರಕಾರ ಬಯಸುತ್ತಿದೆ.

ಕೇಂದ್ರದ ಪಟ್ಟು: ಇದಲ್ಲದೇ ಕೇಂದ್ರ ಸರಕಾರವೂ ವಾಟ್ಸ್‌ಆಪ್ ಮೂಲಕ ಸುಳ್ಳು ಸುದ್ದಿಯನ್ನು ಹಂಚುವವರನ್ನು ಶಿಕ್ಷಿಸುವ ಕಾರ್ಯಕ್ಕೆ ಮುಂದಾಗಿದೆ. ಇದಕ್ಕಾಗಿ ಸುಳ್ಳು ಸುದ್ದಿಯ ಮೂಲಕದ ಬಗ್ಗೆ ಮಾಹಿತಿ ನೀಡುವಂತೆ ವಾಟ್ಸ್‌ಆಪ್‌ಗೆ ಸರಕಾರ ಮನವಿ ಮಾಡಿದೆ ಎನ್ನಲಾಗಿದೆ.

ದೇಶದ ಸುರಕ್ಷತೆ: ಇದಲ್ಲದೇ ದೇಶದ ಸುರಕ್ಷತೆಯ ದೃಷ್ಠಿಯಿಂದ ವಾಟ್ಸ್‌ಆಪ್ ಸುಳ್ಳು ಸುದ್ದಿಯನ್ನು ತಡೆಯಬೇಕು. ಇಲ್ಲವಾದರೆ ಇದರಿಂದಾಗಿ ಮೊಟ್ಟ ಮಟ್ಟದಲ್ಲಿ ಭದ್ರತೆಗೆ ಅಪಾಯ ಇರುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ವಾಟ್ಸ್‌ಆಪ್ ಅನ್ನು ಬಂದ್ ಮಾಡಿಸಲು ಕೇಂದ್ರ ಸರಕಾರವು ಚಿಂತನೆ ನಡೆಸಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago