Featured

ಶೀಘ್ರವೇ ದೇಶದಲ್ಲಿ ವಾಟ್ಸ್‌ಆಪ್ ನಿಷೇಧ..?! ಶಾಕಿಂಗ್ ಕಾರಣ ಕೊಟ್ಟ ಮೋದಿ ಸರ್ಕಾರ..!

ಭಾರತದಲ್ಲಿ ಅತೀ ಹೆಚ್ಚು ಮಂದಿ ಬಳಕೆದಾರರನ್ನು ಹೊಂದಿರುವ ಮೂಲಕ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿರುವ ಫೇಸ್‌ಬುಕ್ ಮಾಲೀಕತ್ವದ ವಾಟ್ಸ್‌ಆಪ್, ಸೋಶಿಯಲ್ ಮೆಸೆಂಜಿಗ್ ಆಪ್ ಸಾಲಿನಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಆಪ್ ಶೀಘ್ರವೇ ಚೀನಾದಂತೆ ಭಾರತೀಯ ಮಾರುಕಟ್ಟೆಯಲ್ಲಿಯೂ ಬ್ಯಾನ್ ಆಗುವ ಸಾಧ್ಯತೆ ಇದೆ. ಈಗಾಗಲೇ ವಾಟ್ಸ್‌ಆಪ್ ಮೇಲೆ ನಿಯಂತ್ರಣ ಸಾಧಿಸಲು ಮುಂದಾಗಿರುವ ಸರಕಾರ, ತನ್ನ ಹಿಡಿತಕ್ಕೆ ಸಿಗದ ವಾಟ್ಸ್‌ಆಪ್ ಮೇಲೆ ನಿಷೇಧದ ದಂಡ ಪ್ರಯೋಗಕ್ಕೆ ಮುಂದಾಗಲಿದೆ ಎನ್ನಲಾಗಿದೆ.

ದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದ ಹಿಂಸಾಚಾರಕ್ಕೆ ಮತ್ತು ನಕಲಿ ಸುದ್ದಿಯನ್ನು ಹರಡಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಾಣವಾಗಲು ವಾಟ್ಸ್‌ಆಪ್ ಸಂದೇಶಗಳೇ ನೇರ ಕಾರಣ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ನಕಲಿ ಸುದ್ದಿಯನ್ನು ನಿಯಂತ್ರಿಸುವ ವಿಷಯದಲ್ಲಿ ವಾಟ್ಸ್‌ಆಪ್ ಸರಕಾರದೊಂದಿಗೆ ಸಮರ ನಡೆಸಲು ಶುರು ಮಾಡಿದೆ.

ಸುಳ್ಳು ಸುದ್ದಿ ತಡೆಗೆ: ವಾಟ್ಸ್‌ಆಪ್‌ನಿಂದಾಗಿ ಕೋಮುಗಲಭೆ, ಗುಂಪು ಹಲ್ಲೆ, ಅಮಾಯಕರ ಮೇಲೆ ದಾಳಿ, ಸುಳ್ಳು ಸುದ್ದಿ, ವ್ಯಕ್ತಿ ನಿಂದನೆ ಸೇರಿದಂತೆ ಹಲವು ಮಾದರಿಯ ತೊಂದರೆಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಅಧಿಕ ಮಂದಿ ಬಳಕೆದಾರರು ಕಣ್ಣು ಮುಚ್ಚಿ ವಾಟ್ಸ್‌ಆಪ್‌ನಲ್ಲಿ ಬರುವ ಮಾಹಿತಿಗಳನ್ನು ನಂಬುವುದು ಮತ್ತು ಅದನ್ನು ಬೇರೆಯವರಿಗೆ ಶೇರ್ ಮಾಡುತ್ತಿರುವುದು. ಈ ಹಿನ್ನಲೆಯಲ್ಲಿ ಈ ಪರಿಸ್ಥಿತಿಯನ್ನು ಸುಧಾರಿಸಲು ವಾಟ್ಸ್‌ಆಪ್‌ ಹೆಚ್ಚಿನ ಶ್ರಮ ವಹಿಸಬೇಕು ಎಂದು ಎಂದು ಕೇಂದ್ರ ಸರಕಾರ ಬಯಸುತ್ತಿದೆ.

ಕೇಂದ್ರದ ಪಟ್ಟು: ಇದಲ್ಲದೇ ಕೇಂದ್ರ ಸರಕಾರವೂ ವಾಟ್ಸ್‌ಆಪ್ ಮೂಲಕ ಸುಳ್ಳು ಸುದ್ದಿಯನ್ನು ಹಂಚುವವರನ್ನು ಶಿಕ್ಷಿಸುವ ಕಾರ್ಯಕ್ಕೆ ಮುಂದಾಗಿದೆ. ಇದಕ್ಕಾಗಿ ಸುಳ್ಳು ಸುದ್ದಿಯ ಮೂಲಕದ ಬಗ್ಗೆ ಮಾಹಿತಿ ನೀಡುವಂತೆ ವಾಟ್ಸ್‌ಆಪ್‌ಗೆ ಸರಕಾರ ಮನವಿ ಮಾಡಿದೆ ಎನ್ನಲಾಗಿದೆ.

ದೇಶದ ಸುರಕ್ಷತೆ: ಇದಲ್ಲದೇ ದೇಶದ ಸುರಕ್ಷತೆಯ ದೃಷ್ಠಿಯಿಂದ ವಾಟ್ಸ್‌ಆಪ್ ಸುಳ್ಳು ಸುದ್ದಿಯನ್ನು ತಡೆಯಬೇಕು. ಇಲ್ಲವಾದರೆ ಇದರಿಂದಾಗಿ ಮೊಟ್ಟ ಮಟ್ಟದಲ್ಲಿ ಭದ್ರತೆಗೆ ಅಪಾಯ ಇರುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ವಾಟ್ಸ್‌ಆಪ್ ಅನ್ನು ಬಂದ್ ಮಾಡಿಸಲು ಕೇಂದ್ರ ಸರಕಾರವು ಚಿಂತನೆ ನಡೆಸಿದೆ.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago