ಭಾರತದಲ್ಲಿ ಅತೀ ಹೆಚ್ಚು ಮಂದಿ ಬಳಕೆದಾರರನ್ನು ಹೊಂದಿರುವ ಮೂಲಕ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿರುವ ಫೇಸ್ಬುಕ್ ಮಾಲೀಕತ್ವದ ವಾಟ್ಸ್ಆಪ್, ಸೋಶಿಯಲ್ ಮೆಸೆಂಜಿಗ್ ಆಪ್ ಸಾಲಿನಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಆಪ್ ಶೀಘ್ರವೇ ಚೀನಾದಂತೆ ಭಾರತೀಯ ಮಾರುಕಟ್ಟೆಯಲ್ಲಿಯೂ ಬ್ಯಾನ್ ಆಗುವ ಸಾಧ್ಯತೆ ಇದೆ. ಈಗಾಗಲೇ ವಾಟ್ಸ್ಆಪ್ ಮೇಲೆ ನಿಯಂತ್ರಣ ಸಾಧಿಸಲು ಮುಂದಾಗಿರುವ ಸರಕಾರ, ತನ್ನ ಹಿಡಿತಕ್ಕೆ ಸಿಗದ ವಾಟ್ಸ್ಆಪ್ ಮೇಲೆ ನಿಷೇಧದ ದಂಡ ಪ್ರಯೋಗಕ್ಕೆ ಮುಂದಾಗಲಿದೆ ಎನ್ನಲಾಗಿದೆ.
ದೇಶದಲ್ಲಿ ಅತೀ ಹೆಚ್ಚಿನ ಪ್ರಮಾಣದ ಹಿಂಸಾಚಾರಕ್ಕೆ ಮತ್ತು ನಕಲಿ ಸುದ್ದಿಯನ್ನು ಹರಡಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಾಣವಾಗಲು ವಾಟ್ಸ್ಆಪ್ ಸಂದೇಶಗಳೇ ನೇರ ಕಾರಣ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ನಕಲಿ ಸುದ್ದಿಯನ್ನು ನಿಯಂತ್ರಿಸುವ ವಿಷಯದಲ್ಲಿ ವಾಟ್ಸ್ಆಪ್ ಸರಕಾರದೊಂದಿಗೆ ಸಮರ ನಡೆಸಲು ಶುರು ಮಾಡಿದೆ.
ಸುಳ್ಳು ಸುದ್ದಿ ತಡೆಗೆ: ವಾಟ್ಸ್ಆಪ್ನಿಂದಾಗಿ ಕೋಮುಗಲಭೆ, ಗುಂಪು ಹಲ್ಲೆ, ಅಮಾಯಕರ ಮೇಲೆ ದಾಳಿ, ಸುಳ್ಳು ಸುದ್ದಿ, ವ್ಯಕ್ತಿ ನಿಂದನೆ ಸೇರಿದಂತೆ ಹಲವು ಮಾದರಿಯ ತೊಂದರೆಗಳು ಹೆಚ್ಚಾಗುತ್ತಿದೆ. ಇದಕ್ಕೆ ಕಾರಣ ಅಧಿಕ ಮಂದಿ ಬಳಕೆದಾರರು ಕಣ್ಣು ಮುಚ್ಚಿ ವಾಟ್ಸ್ಆಪ್ನಲ್ಲಿ ಬರುವ ಮಾಹಿತಿಗಳನ್ನು ನಂಬುವುದು ಮತ್ತು ಅದನ್ನು ಬೇರೆಯವರಿಗೆ ಶೇರ್ ಮಾಡುತ್ತಿರುವುದು. ಈ ಹಿನ್ನಲೆಯಲ್ಲಿ ಈ ಪರಿಸ್ಥಿತಿಯನ್ನು ಸುಧಾರಿಸಲು ವಾಟ್ಸ್ಆಪ್ ಹೆಚ್ಚಿನ ಶ್ರಮ ವಹಿಸಬೇಕು ಎಂದು ಎಂದು ಕೇಂದ್ರ ಸರಕಾರ ಬಯಸುತ್ತಿದೆ.
ಕೇಂದ್ರದ ಪಟ್ಟು: ಇದಲ್ಲದೇ ಕೇಂದ್ರ ಸರಕಾರವೂ ವಾಟ್ಸ್ಆಪ್ ಮೂಲಕ ಸುಳ್ಳು ಸುದ್ದಿಯನ್ನು ಹಂಚುವವರನ್ನು ಶಿಕ್ಷಿಸುವ ಕಾರ್ಯಕ್ಕೆ ಮುಂದಾಗಿದೆ. ಇದಕ್ಕಾಗಿ ಸುಳ್ಳು ಸುದ್ದಿಯ ಮೂಲಕದ ಬಗ್ಗೆ ಮಾಹಿತಿ ನೀಡುವಂತೆ ವಾಟ್ಸ್ಆಪ್ಗೆ ಸರಕಾರ ಮನವಿ ಮಾಡಿದೆ ಎನ್ನಲಾಗಿದೆ.
ದೇಶದ ಸುರಕ್ಷತೆ: ಇದಲ್ಲದೇ ದೇಶದ ಸುರಕ್ಷತೆಯ ದೃಷ್ಠಿಯಿಂದ ವಾಟ್ಸ್ಆಪ್ ಸುಳ್ಳು ಸುದ್ದಿಯನ್ನು ತಡೆಯಬೇಕು. ಇಲ್ಲವಾದರೆ ಇದರಿಂದಾಗಿ ಮೊಟ್ಟ ಮಟ್ಟದಲ್ಲಿ ಭದ್ರತೆಗೆ ಅಪಾಯ ಇರುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ವಾಟ್ಸ್ಆಪ್ ಅನ್ನು ಬಂದ್ ಮಾಡಿಸಲು ಕೇಂದ್ರ ಸರಕಾರವು ಚಿಂತನೆ ನಡೆಸಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…