Featured

ಶೀಘ್ರವೇ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಅರಗ ಜ್ಞಾನೇಂದ್ರ – Vishwanews24

ಶೀಘ್ರವೇ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಅರಗ ಜ್ಞಾನೇಂದ್ರ

ಚಿತ್ರದುರ್ಗ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 1 ಲಕ್ಷ ಪೊಲೀಸ್ ಹುದ್ದೆಗಳ ಪೈಕಿ 35 ಸಾವಿರ ಹುದ್ದೆಗಳು ಖಾಲಿ ಇದ್ದವು. ಪ್ರತಿ ವರ್ಷ ಸರಾಸರಿ 5 ಸಾವಿರ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳನ್ನು ತುಂಬುತ್ತಾ ಬರಲಾಗಿದೆ. ಸದ್ಯ 12 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು.

ರಾಜ್ಯ ಪೊಲೀಸ್ ಇಲಾಖೆ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಹರಿಯಾಣದಲ್ಲಿ ಜರುಗಿದ ಎಲ್ಲಾ ರಾಜ್ಯಗಳ ಗೃಹ ಸಚಿವರು ಹಾಗೂ ಪೊಲೀಸ್ ಮಹಾನಿರ್ದೇಶಕರ ಸಮ್ಮೇಳನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಪೊಲೀಸರನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಪೊಲೀಸರಿಗೆ ನೂತನ ಶಸ್ತ್ರಾಸ್ತ್ರಗಳ ತರಬೇತಿ ನೀಡಲಾಗುವುದು. ಅಪರಾಧಗಳ ಪತ್ತೆಗಾಗಿ 206 ಸೀನ್ ಆಫ್ ಕ್ರೈಮ್ ಅಧಿಕಾರಿಗಳನ್ನು ನೇಮಿಸಲಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್.ಎಸ್.ಎಲ್) ಆಧುನೀಕರಣಕ್ಕೆ ಒತ್ತು ನೀಡಲಾಗಿದೆ. 9 ಸಂಚಾರಿ ಎಫ್.ಎಸ್.ಎಲ್ ಲ್ಯಾಬ್‍ಗಳನ್ನು ಮಾಡಲಾಗಿದೆ. ಕಳೆದ ಐದಾರು ತಿಂಗಳಲ್ಲಿ ಹುಬ್ಬಳ್ಳಿ ಮತ್ತು ಬಳ್ಳಾರಿ ನೂತನ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಶಿವಮೊಗ್ಗ ಹಾಗೂ ಹಾಸನದಲ್ಲಿ ಕೂಡ ವಿಧಿ ವಿಜ್ಞಾನ ಪ್ರಯೋಗಾಲಯ ಸ್ಥಾಪನೆ ಮಾಡಲಾಗುವುದು. ಕೇವಲ ನಾಲ್ಕೈದು ತಿಂಗಳೊಳಗೆ ಎಫ್.ಎಸ್.ಎಲ್ ವರದಿ ಬರಬೇಕು. ಇದರಿಂದ ಜಾರ್ಜ್‍ಶೀಟ್ ಹಾಕಲು ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago