Featured

ಶೀರೂರು ಶ್ರೀಗಳದ್ದು ಸ್ವಾಭಾವಿಕ ಸಾವಲ್ಲ , ಶ್ರೀಗಳ ಅಸಹಜ ಸಾವಿಗೆ ನ್ಯಾಯ ಸಿಗಲೇ ಬೇಕು : ವಕೀಲ ರವಿಕಿರಣ್‌ -Vishwanews24

ಉಡುಪಿ: ಶೀರೂರು ಶ್ರೀ ಲಕ್ಷ್ಮೇವರ ತೀರ್ಥರ ಮರಣೋತ್ತರ ಪರೀಕ್ಷೆ ನಡೆಸಿದ ಮಣಿಪಾಲ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಶ್ರೀಗಳ ರಕ್ತ, ಮೂತ್ರ ಹಾಗೂ ಉದರಾಂಗಗಳಲ್ಲಿ ವಿಷದ ಅಂಶ ಪತ್ತೆಯಾಗಿರುವ ಬಗ್ಗೆ ಉಲ್ಲೇಖ ಮಾಡಿದ್ದು ಹೀಗಾಗಿ ಅವರ ಸಾವು ಸ್ವಾಭಾವಿಕ ಸಾವಲ್ಲ ಅಂತ ವಕೀಲ ರವಿಕಿರಣ್‌ ಮುರ್ಡೇಶ್ವರ ತಿಳಿಸಿದ್ದಾರೆ.

ಅವರು ಶಿರೂರು ಸ್ವಾಮಿಗಳ ಸಾವಿಗೆ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ವಿಶೇಷ ಮಕ್ಕಳ ಸಮ್ಮುಖದಲ್ಲಿ ಸಂಸ್ಮರಣಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು ಎ.ಸಿ ಕುಂದಾಪುರ ನ್ಯಾಯಲಯದಲ್ಲಿ ನಡೆಯುವ ಈ ಕೇಸು ಇನ್ನೂ ಕೂಡ ತೆರೆಯಲು ಅವಕಾಶ ಇದೆ. ಯಾವುದೆ ಕೊಲೆ ಅಥವಾ ಸಂಶಯಾಶ್ಪದ ಮರಣವಾಗಿದ್ದಲ್ಲಿ ಅದನ್ನು ಮತ್ತೆ ತೆರೆಯಲು ಅವಕಾಶವಿದೆ.

ಮಣಿಪಾಲದ ಕೆಎಮ್ ಸಿ ಆಸ್ಪತ್ರೆಯಲ್ಲಿ ನಡೆದ ಮರಣೋತ್ರರ ಪರೀಕ್ಷಯ ವರದಿ ಮತ್ತು ವಿಧಿ ವಿಜ್ಞಾನ ವರದಿ ಎರಡನ್ನ ಒಟ್ಟು ಗೂಡಿಸಿದ ಸಮಗ್ರ ವರದಿ( report-blood tested positive for organoprosporous urine sample tested for benzodiazepine)ಯನ್ನು ನ್ಯಾಯಲಯಕ್ಕೆ ಸಲ್ಲಿಸಲಾಗಿದ್ದರೂ ವಯೋ ಸಹಜ ಸಾವು ಎಂದು ತೀರ್ಪು ಬಂದಿದ್ದು ಒಪ್ಪತಕ್ಕದ್ದಲ್ಲ. ಇನ್ನೂ ಕೂಡ ಉಚ್ಚ ನ್ಯಾಯಾಲಯಲ್ಲಿ ರಿಟ್ ಪಿಟಿಷನ್ ಹಾಕುವ ಅವಕಾಶವಿದೆ. ಶ್ರೀಗಳ ಅಸಹಜ ಸಾವಿಗೆ ನ್ಯಾಯ ಸಿಗಲೇ ಬೇಕು. ಸ್ವಾಮೀಜಿಯ ಸುತ್ತಮುತ್ತ ಇದ್ದ ವಿರೋದ ಅಂಶಗಳನ್ನು ತೆಗೆದು ಕೊಳ್ಳಬೇಕು. ನ್ಯಾಯ ಪಡೆಯಲು ಎಲ್ಲಾ ದಿಕ್ಕಿನಿಂದ ಆಲೋಚನೆ ಮಾಡುವ ಅನಿವಾರ್ಯತೆ ಇದೆ ಎಂದು ವಕೀಲ ಒತ್ತಾಯಿಸಿದರು.

ಆದ್ರೆ ಮಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲದಿಂದ ಬಂದ ಅಂತಿಮ ವರದಿಯಲ್ಲಿ ಯಾವುದೇ ವಿಷಕಾರಿ ಅಂಶ ಇಲ್ಲ ಎಂದು ಹೇಳಲಾಗಿತ್ತು. ಎರಡನೇ ವರದಿಯ ಆಧಾರದಲ್ಲಿ ತನಿಖಾಧಿಕಾರಿಗಳು ಇದೊಂದು ಸ್ವಾಭಾವಿಕ ಸಾವು ಎಂಬ ನಿರ್ಣಯಕ್ಕೆ ಬಂದಿದ್ದರು. ವಿಷಕಾರಿ ಅಂಶಗಳಿರುವ ವರದಿಯನ್ನಿಟ್ಟುಕೊಂಡು ಪ್ರಕರಣ ರೀ ಓಪನ್ ಮಾಡಬಹುದು ಅ ಅಂತ ಹೇಳಿದರು.

ಈ ಸಂದರ್ಭದಲ್ಲಿ, ಸಾಯಿರಾಧ ಡೆವಲಪರ್ ನ ಮ್ಯಾನೇಜಿಂಗ್ ಡೈರೆಕ್ಟರ್ ಮನೋಹರ್ ಶೆಟ್ಟಿ, ಬಡಗುಬೆಟ್ಟು ಕ್ರೆಡಿಟ್ ಕೋಪರೇಟಿವ್ ನ ಜನರಲ್ ಮ್ಯಾನೇಜರ್ ಜಯಕರ್ ಶೇಟ್ಟಿ ಇಂದ್ರಾಳಿ, ಏಸ್ ಸಂಸ್ಥೆಯ ನಿರ್ದೇಶಕರಾದ ಲತಾವ್ಯ ಆಚಾರ್ಯ ಶ್ರೀಕಾಂತ್ ಶೆಟ್ಟಿ, ಸ್ಪಂಧನ ಶಾಲೆಯ ಮುಖ್ಯಸ್ಥರಾದ ಜನಾರ್ಧನ, ನವೀನ್ ರಾವ್, ರಾಧಾ ಕೃಷ್ಣ ಶೆಟ್ಟಿ, ಸಂತೋಷ್, ಭಾಸ್ಕರ್ ಮತ್ತಿರರು ಉಪಸ್ಥಿತರಿದ್ದರು.

Vishwa News 24

Recent Posts

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

8 minutes ago

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ – vishwanews24

ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…

21 minutes ago

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

30 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

38 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

59 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago