ಚಿಕ್ಕಮಗಳೂರು : ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರ, ಅತ್ಯಾಚಾರ ಅತ್ಯಂತ ಖಂಡನೀಯವಾದುದು. ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ನೀಡಲು ಸೂಚಿಸಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿಯನ್ನು ಸುಮಾರು 30 ಮಂದಿ ಸಾಮೂಹಿಕ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದ ಸಂಸದೆ ಈ ಪ್ರಕರಣ ಗಂಭೀರವಾಗಿದ್ದು, ಅಪ್ರಾಪ್ತ ಬಾಲಕಿಯ ಭವಿಷ್ಯದ ವಿಚಾರವಾಗಿರುವುದರಿಂದ, ಮಾಧ್ಯಮಕ್ಕೆ ಬಹಿರಂಗ ಹೇಳಿಕೆ ನೀಡುವುದು ಸರಿಯಲ್ಲ ಎಂಬುದು ನನ್ನ ಅಭಿಪ್ರಾಯ ಎಂದು ತಿಳಿಸಿರು.
ಕೆಂಪುಕೋಟೆ ಮೇಲೆ ಅನ್ಯ ಧ್ವಜ ಹಾರಿಸಿದ ಪ್ರಕರಣ : ಓರ್ವ ಪೊಲೀಸ್ ವಶಕ್ಕೆ -Vishwanews24
ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣದಲ್ಲಿಯೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿರುತ್ತಾರೆ. ಬಾಲಕಿಯನ್ನು ಕರೆತಂದು ದುರುಪಯೋಗ ಮಾಡಿದ ಅವಳ ಚಿಕ್ಕಮ್ಮ ಎಂದು ಕರೆಯಲ್ಪಡುವ ಗೀತಳನ್ನು ಕೂಡ ಬಂಧಿಸಿ ವಿಚಾರಿಸಲಾಗುತ್ತಿದೆ.
SSLC ಓದುವ ಹುಡುಗಿ ತನ್ನ ಊರಿನಿಂದ ಇಲ್ಲಿಗೆ ಯಾಕೆ ಬಂದಳು? ಯಾಕೆ ಅವಳನ್ನು ಚಿಕ್ಕಮ್ಮ ದುರುಪಯೋಗ ಮಾಡಿದಳು? ಇದೇ ರೀತಿ ಇನ್ಯಾವ ಹುಡುಗಿಯ ಜೊತೆ ಗೀತಾ ಸಂಪರ್ಕ ಬೆಳೆಸಿದ್ದಾಳೆ ಎಂಬುದರ ಕುರಿತು ಕೂಡ ತನಿಖೆ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ. ಪ್ರತಿನಿತ್ಯ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಈ ಕೇಸನ್ನು ನಿಗಾವಹಿಸಿ ಗಮನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಉಡುಪಿ: ಉದ್ಯಾವರದ ಕಲ್ಸಂಕದಲ್ಲಿ ಏಳನೇ ಶತಮಾನದ ಆಳುಪರ ಕಾಲದ ಶಾಸನ ಪತ್ತೆ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…