ಕುಂದಾಪುರ, : ವಿವಾಹಿತರಾಗಿರುವ ಪ್ರೇಮಿಗಳಿಬ್ಬರು ಕುಂದಾಪುರದ ಲಾಡ್ಜೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶೃಂಗೇರಿಯ ಕಳಸಪ್ಪ ಗೌಡ ಎಂಬಾತನ ಮಗ ಗುರುಮೂರ್ತಿ(43) ಹಾಗೂ ಕೊಪ್ಪದ ಜಯಪುರ ಎಂಬಲ್ಲಿಯ ನಿವಾಸಿ ಶೃಂಗೇರಿಗೆ ವಿವಾಹ ಮಾಡಿಕೊಟ್ಟಿರುವ ಗೋವಿಂದ ಎಂಬಾತನ ಪುತ್ರಿ ಶಾರದಾ(30) ಎಂದು ಗುರುತಿಸಲಾಗಿದೆ.
ಗುರುಮೂರ್ತಿ ವಿವಾಹಿತನಾಗಿದ್ದು ಆತನಿಗೆ ಇಬ್ಬರು ಮಕ್ಕಳಿದ್ದಾರೆ.ಹಾಗೂ ಶಾರದಾಳಿಗೂ ಎಂಟು ವರ್ಷದ ಓರ್ವ ಪುತ್ರಿಯಿದ್ದಾಳೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟಂಬರ್ ೨೬ರಂದು ಬೆಳಿಗ್ಗೆ ಕುಂದಾಪುರದ ಹೋಟೆಲ್ ಹರಿಪ್ರಸಾದ್ಗೆ ಬಂದಿದ್ದರು. ತಮ್ಮನ್ನು ಗಂಡ ಹೆಂಡತಿ ಎಂದು ಪರಿಚಯಿಸಿ ಗುರುಮೂರ್ತಿಯ ಚುನಾವಣಾ ಗುರುತಿನ ಚೀಟಿ ನೀಡಿ ಕೊಠಡಿ ಸಂಖ್ಯೆ 103ರಲ್ಲಿ ಉಳಿದುಕೊಂಡಿದ್ದರು. ನಾಲ್ಕು ದಿನಕ್ಕಾಗಿ ಹರಿಪ್ರಸಾದ್ ಲಾಡ್ಜ್ ನಲ್ಲಿ ಕೊಠಡಿ ಪಡೆದಿತ್ತು. ಸುತ್ತಮುತ್ತ ಓಡಾಡಿಕೊಂಡು ಮತ್ತೆ ಬಂದು ಲಾಡ್ಜ್ ನಲ್ಲಿ ತಂಗುತ್ತಿದ್ದರು. ಆದರೆ ಕಳೆದ ರಾತ್ರಿಯಿಂದ ಕೊಠಡಿ ಬಂದ್ ಇತ್ತು. ಸಂಜೆಯವರೆಗೆ ಬಾಗಿಲು ತೆಗೆಯದ ಕಾರಣ ಲಾಡ್ಜ್ ಸಿಬ್ಬಂದಿ ಸಂಶಯ ವ್ಯಕ್ತಪಡಿಸಿ, ಬಾಗಿಲು ಒಡೆದಿದ್ದಾರೆ. ಈ ಸಂದರ್ಭ ಎರಡು ಮೃತದೇಹಗಳು ಕಂಡುಬಂದಿದೆ. ಗುರುಮೂರ್ತಿ ಮೃತದೇಹ ಬೆಡ್ ಮೇಲಿದ್ದರೆ, ಶಾರದಾ ದೇಹ ಕೆಳಗೆ ಮಲಗಿದ ಸ್ಥಿತಿಯಲ್ಲಿತ್ತು.
ಗುರುಮೂರ್ತಿ ಹಾಗೂ ಶಾರದಾ ಪ್ರೀತಿಗೆ, ಅಕ್ರಮ ಸಂಬಂಧಕ್ಕೆ ಶಾರದಾ ಗಂಡ ರಮೇಶ ತಡೆಯೊಡ್ಡಿದ್ದನಂತೆ. ಈ ಬಗ್ಗೆ ಸಾಕಷ್ಟು ಬಾರಿ ಗಲಾಟೆಯಾಗಿದೆ ಅಂತ ಮೃತರ ಸಂಬಂಧಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಘಟನೆಯ ಕುರಿತಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…