ಕುಂದಾಪುರ, : ವಿವಾಹಿತರಾಗಿರುವ ಪ್ರೇಮಿಗಳಿಬ್ಬರು ಕುಂದಾಪುರದ ಲಾಡ್ಜೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶೃಂಗೇರಿಯ ಕಳಸಪ್ಪ ಗೌಡ ಎಂಬಾತನ ಮಗ ಗುರುಮೂರ್ತಿ(43) ಹಾಗೂ ಕೊಪ್ಪದ ಜಯಪುರ ಎಂಬಲ್ಲಿಯ ನಿವಾಸಿ ಶೃಂಗೇರಿಗೆ ವಿವಾಹ ಮಾಡಿಕೊಟ್ಟಿರುವ ಗೋವಿಂದ ಎಂಬಾತನ ಪುತ್ರಿ ಶಾರದಾ(30) ಎಂದು ಗುರುತಿಸಲಾಗಿದೆ.
ಗುರುಮೂರ್ತಿ ವಿವಾಹಿತನಾಗಿದ್ದು ಆತನಿಗೆ ಇಬ್ಬರು ಮಕ್ಕಳಿದ್ದಾರೆ.ಹಾಗೂ ಶಾರದಾಳಿಗೂ ಎಂಟು ವರ್ಷದ ಓರ್ವ ಪುತ್ರಿಯಿದ್ದಾಳೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಸೆಪ್ಟಂಬರ್ ೨೬ರಂದು ಬೆಳಿಗ್ಗೆ ಕುಂದಾಪುರದ ಹೋಟೆಲ್ ಹರಿಪ್ರಸಾದ್ಗೆ ಬಂದಿದ್ದರು. ತಮ್ಮನ್ನು ಗಂಡ ಹೆಂಡತಿ ಎಂದು ಪರಿಚಯಿಸಿ ಗುರುಮೂರ್ತಿಯ ಚುನಾವಣಾ ಗುರುತಿನ ಚೀಟಿ ನೀಡಿ ಕೊಠಡಿ ಸಂಖ್ಯೆ 103ರಲ್ಲಿ ಉಳಿದುಕೊಂಡಿದ್ದರು. ನಾಲ್ಕು ದಿನಕ್ಕಾಗಿ ಹರಿಪ್ರಸಾದ್ ಲಾಡ್ಜ್ ನಲ್ಲಿ ಕೊಠಡಿ ಪಡೆದಿತ್ತು. ಸುತ್ತಮುತ್ತ ಓಡಾಡಿಕೊಂಡು ಮತ್ತೆ ಬಂದು ಲಾಡ್ಜ್ ನಲ್ಲಿ ತಂಗುತ್ತಿದ್ದರು. ಆದರೆ ಕಳೆದ ರಾತ್ರಿಯಿಂದ ಕೊಠಡಿ ಬಂದ್ ಇತ್ತು. ಸಂಜೆಯವರೆಗೆ ಬಾಗಿಲು ತೆಗೆಯದ ಕಾರಣ ಲಾಡ್ಜ್ ಸಿಬ್ಬಂದಿ ಸಂಶಯ ವ್ಯಕ್ತಪಡಿಸಿ, ಬಾಗಿಲು ಒಡೆದಿದ್ದಾರೆ. ಈ ಸಂದರ್ಭ ಎರಡು ಮೃತದೇಹಗಳು ಕಂಡುಬಂದಿದೆ. ಗುರುಮೂರ್ತಿ ಮೃತದೇಹ ಬೆಡ್ ಮೇಲಿದ್ದರೆ, ಶಾರದಾ ದೇಹ ಕೆಳಗೆ ಮಲಗಿದ ಸ್ಥಿತಿಯಲ್ಲಿತ್ತು.
ಗುರುಮೂರ್ತಿ ಹಾಗೂ ಶಾರದಾ ಪ್ರೀತಿಗೆ, ಅಕ್ರಮ ಸಂಬಂಧಕ್ಕೆ ಶಾರದಾ ಗಂಡ ರಮೇಶ ತಡೆಯೊಡ್ಡಿದ್ದನಂತೆ. ಈ ಬಗ್ಗೆ ಸಾಕಷ್ಟು ಬಾರಿ ಗಲಾಟೆಯಾಗಿದೆ ಅಂತ ಮೃತರ ಸಂಬಂಧಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಘಟನೆಯ ಕುರಿತಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…