Featured

ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ; ತಾಯಿಯ ಅನುಮತಿಯಿಂದ ನಡೆಯಿತು ರೇಪ್ ! Vishwanews24‌

ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ; ತಾಯಿಯ ಅನುಮತಿಯಿಂದ ನಡೆಯಿತು ರೇಪ್ ! Vishwanews24‌

ಶೃಂಗೇರಿ : ಅಪ್ರಾಪ್ತ ಬಾಲಕಿ ಮೇಲೆ 30ಕ್ಕೂ ಹೆಚ್ಚು ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ಪ್ರಮುಖ ಆರೋಪಿಯ ಬಗ್ಗೆ ತಿಳಿದು ಬಂದಿದೆ. ಈ ಆರೋಪಿ ಆ ಅಪ್ರಾಪ್ತ ಬಾಲಕಿಯ ತಾಯಿಯೇ ಆಗಿದ್ದಾಳೆ ಎಂದು ವರದಿಯಾಗಿದೆ.

2021 ಜನವರಿ 30ರಂದು ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ ನಡೆಯುತ್ತಿರುವ ಬಗ್ಗೆ ವರದಿಯಾಗಿತ್ತು. ಅದೇ ದಿನ ಈ ಬಗ್ಗೆ ಪೊಲೀಸರು ಎಫ್‌ಐಆರ್‌ ಕೂಡಾ ದಾಖಲು ಮಾಡಿದ್ದರು. 2020 ಸೆಪ್ಟಂಬರ್‌ 1ರಿಂದ 2021 ಜನವರಿ 27ರವರೆಗೆ 30ಕ್ಕೂ ಹೆಚ್ಚು ಮಂದಿ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು 15 ವರ್ಷದ ಬಾಲಕಿ ದೂರಿನಲ್ಲಿ ತಿಳಿಸಿದ್ದಳು. ಈ ದೂರಿನ ಆಧಾರದಲ್ಲಿ ಪೊಲೀಸರು ಈಗಾಗಲೇ 32 ಮಂದಿಯನ್ನು ಬಂಧಿಸಿದ್ದಾರೆ.

ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24

ಈ ಪ್ರಕರಣದ ತನಿಖೆ ಸಂದರ್ಭ ಆತಂಕಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ತನ್ನ ಮಗಳ ಮೇಲೆಯೇ ಅತ್ಯಾಚಾರವೆಸಗಲು ತಾಯಿ ಅವಕಾಶ ನೀಡಿದ್ದಾಳೆ. ಇಷ್ಟರವರೆಗೆ ತಾನು ಬಾಲಕಿಯ ಚಿಕ್ಕಮ್ಮ ಎಂದು ಹೇಳಿಕೊಂಡಿದ್ದ ಆ ಮಹಿಳೆ ಆ ಬಾಲಕಿಯ ನಿಜವಾದ ತಾಯಿಯಾಗಿದ್ದಾಳೆ.

ಈ ಮಹಿಳೆಗೆ ಉತ್ತರ ಕರ್ನಾಟಕ ಜಿಲ್ಲೆಯೊಂದರಲ್ಲಿ ಮದುವೆ ಆಗಿದ್ದು ಮಗು ಜನಿಸಿದ್ದಳು. ಬಳಿಕ ಶೃಂಗೇರಿ ತಾಲೂಕಿನ ವ್ಯಕ್ತಿಯೊಬ್ಬರೊಂದಿಗೆ ವಿವಾಹವಾಗಿತ್ತು. ವಿವಾಹವಾದ ಕೆಲ ದಿನಗಳ ಬಳಿಕ ಆಕೆ ತನ್ನ ಮಗಳನ್ನು ಶೃಂಗೇರಿಗೆ ಕರೆಸಿಕೊಂಡು ತನ್ನ ಅಕ್ಕನ ಮಗಳು ಎಂದು ಹೇಳಿಕೊಂಡಿದ್ದಳು ಎಂದು ವರದಿಯಾಗಿದೆ.

ಬಳಿಕ ಎರಡನೇ ಪತಿಯಿಂದಲೂ ಈ ಮಹಿಳೆ ದೂರವಾಗಿದ್ದು ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಮಗಳನ್ನು ಅನೈತಿಕ ಚಟುವಟಿಕೆಗೆ ಎಳೆದು ಆಕೆಯ ಮೇಲೆ ನಿರಂತರ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾಳೆ ಎಂದು ತನಿಖೆಯ ವೇಳೆ ತಿಳಿದು ಬಂದಿರುವುದಾಗಿ ವರದಿಯಾಗಿದೆ.

ಉಡುಪಿ : ಕೇಂದ್ರ, ರಾಜ್ಯ ಸರಕಾರಗಳ ಜನವಿರೋಧಿ ನೀತಿ ವಿರೋಧಿಸಿ ಮಾ.25ರಂದು ಕಾಪು ಉತ್ತರ ಬ್ಲಾಕ್ ಸಮಿತಿಯಿಂದ ‘ಜನಧ್ವನಿ’ ಪಾದಯಾತ್ರೆ : ವಿನಯ ಕುಮಾರ್ ಸೊರಕೆ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

6 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

6 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

7 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

7 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

7 hours ago