ಶೃಂಗೇರಿ : ಅಪ್ರಾಪ್ತ ಬಾಲಕಿ ಮೇಲೆ 30ಕ್ಕೂ ಹೆಚ್ಚು ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯಲ್ಲಿ ಪ್ರಮುಖ ಆರೋಪಿಯ ಬಗ್ಗೆ ತಿಳಿದು ಬಂದಿದೆ. ಈ ಆರೋಪಿ ಆ ಅಪ್ರಾಪ್ತ ಬಾಲಕಿಯ ತಾಯಿಯೇ ಆಗಿದ್ದಾಳೆ ಎಂದು ವರದಿಯಾಗಿದೆ.
2021 ಜನವರಿ 30ರಂದು ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ ನಡೆಯುತ್ತಿರುವ ಬಗ್ಗೆ ವರದಿಯಾಗಿತ್ತು. ಅದೇ ದಿನ ಈ ಬಗ್ಗೆ ಪೊಲೀಸರು ಎಫ್ಐಆರ್ ಕೂಡಾ ದಾಖಲು ಮಾಡಿದ್ದರು. 2020 ಸೆಪ್ಟಂಬರ್ 1ರಿಂದ 2021 ಜನವರಿ 27ರವರೆಗೆ 30ಕ್ಕೂ ಹೆಚ್ಚು ಮಂದಿ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು 15 ವರ್ಷದ ಬಾಲಕಿ ದೂರಿನಲ್ಲಿ ತಿಳಿಸಿದ್ದಳು. ಈ ದೂರಿನ ಆಧಾರದಲ್ಲಿ ಪೊಲೀಸರು ಈಗಾಗಲೇ 32 ಮಂದಿಯನ್ನು ಬಂಧಿಸಿದ್ದಾರೆ.
ಉಡುಪಿ : ತೀರ್ಥಹಳ್ಳಿ – ಮಲ್ಪೆ ರಾ.ಹೆ ಅಭಿವೃದ್ದಿಗೆ ನಿತಿನ್ ಗಡ್ಕರಿ ಸೂಚನೆ : ಸಂಸದೆ ಶೋಭಾ ಕರಂದ್ಲಾಜೆ-Vishwanews24
ಈ ಪ್ರಕರಣದ ತನಿಖೆ ಸಂದರ್ಭ ಆತಂಕಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ತನ್ನ ಮಗಳ ಮೇಲೆಯೇ ಅತ್ಯಾಚಾರವೆಸಗಲು ತಾಯಿ ಅವಕಾಶ ನೀಡಿದ್ದಾಳೆ. ಇಷ್ಟರವರೆಗೆ ತಾನು ಬಾಲಕಿಯ ಚಿಕ್ಕಮ್ಮ ಎಂದು ಹೇಳಿಕೊಂಡಿದ್ದ ಆ ಮಹಿಳೆ ಆ ಬಾಲಕಿಯ ನಿಜವಾದ ತಾಯಿಯಾಗಿದ್ದಾಳೆ.
ಈ ಮಹಿಳೆಗೆ ಉತ್ತರ ಕರ್ನಾಟಕ ಜಿಲ್ಲೆಯೊಂದರಲ್ಲಿ ಮದುವೆ ಆಗಿದ್ದು ಮಗು ಜನಿಸಿದ್ದಳು. ಬಳಿಕ ಶೃಂಗೇರಿ ತಾಲೂಕಿನ ವ್ಯಕ್ತಿಯೊಬ್ಬರೊಂದಿಗೆ ವಿವಾಹವಾಗಿತ್ತು. ವಿವಾಹವಾದ ಕೆಲ ದಿನಗಳ ಬಳಿಕ ಆಕೆ ತನ್ನ ಮಗಳನ್ನು ಶೃಂಗೇರಿಗೆ ಕರೆಸಿಕೊಂಡು ತನ್ನ ಅಕ್ಕನ ಮಗಳು ಎಂದು ಹೇಳಿಕೊಂಡಿದ್ದಳು ಎಂದು ವರದಿಯಾಗಿದೆ.
ಬಳಿಕ ಎರಡನೇ ಪತಿಯಿಂದಲೂ ಈ ಮಹಿಳೆ ದೂರವಾಗಿದ್ದು ಮಗಳೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಮಗಳನ್ನು ಅನೈತಿಕ ಚಟುವಟಿಕೆಗೆ ಎಳೆದು ಆಕೆಯ ಮೇಲೆ ನಿರಂತರ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾಳೆ ಎಂದು ತನಿಖೆಯ ವೇಳೆ ತಿಳಿದು ಬಂದಿರುವುದಾಗಿ ವರದಿಯಾಗಿದೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…