ಚಿಕ್ಕಮಗಳೂರು: ಶೃಂಗೇರಿ ವಿದ್ಯಾರ್ಥಿನಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.
ಸಂತೋಷ್, ಪ್ರದೀಪ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ.
2016ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿ, ಕೊಂದು ಪಾಳು ಬಾವಿಗೆ ಎಸೆಯಲಾಗಿತ್ತು. ಈ ಘಟನೆ ಚಿಕ್ಕಮಗಳೂರು ಮಾತ್ರವಲ್ಲದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮೆಣಸೆಯಿಂದ ಕಾಲುದಾರಿಯಲ್ಲಿ ಮನೆಗೆ ಹೋಗುತ್ತಿದ್ದ ಬಿಕಾಂ ವಿದ್ಯಾರ್ಥಿನಿಯನ್ನು ಎಳೆದೊಯ್ದಿದ್ದ ಅದೇ ಊರಿನ ಯುವಕರು ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ, 50 ಅಡಿಯ ಬಾವಿಯಲ್ಲಿ ಎಸೆದು ಹೋಗಿದ್ದರು.
ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತೋಷ್, ಪ್ರದೀಪ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಿ ಚಿಕ್ಕಮಗಳೂರು ಪ್ರಧಾನ ನ್ಯಾಯಾಲಯ ಆದೇಶ ಹೊರಡಿಸಿದೆ. 4 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆದಿತ್ತು. ಇಂದು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ತೀರ್ಪು ಪ್ರಕಟಗೊಳಿಸಿದ್ದಾರೆ. ಮೃತ ಯುವತಿಯ ಪರ ಹಿರಿಯ ವಕೀಲ ವಿ.ಜಿ. ಯಲಕೇರಿ ವಾದ ಮಂಡಿಸಿ, ಮರಣದಂಡನೆ ವಿಧಿಸುವಂತೆ ಕೋರ್ಟ್ಗೆ ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿರುವ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ಘೋಷಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…