ಚಿಕ್ಕಮಗಳೂರು: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಎಸ್ಡಿಪಿಐ ಬಾವುಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮಿಲಿಂದಾ ಅಲಿಯಾಸ್ ಮಿಲ್ಲಿ ಎನ್ನಲಾಗಿದೆ. ಕಳ್ಳತನದ ಪ್ರಕರಣವೊಂದರಲ್ಲಿ ವಿಚಾರಣೆ ಎದುರಿಸುತ್ತಿದ್ದ ಈತ ಪೊಲೀಸರ ಮೇಲಿನ ದ್ವೇಷದಿಂದ ಈ ರೀತಿಯಾದ ಕೃತ್ಯವೆಸಗಿದ್ದಾನೆ.
ಈ ಕೃತ್ಯವು ಸಿಸಿಟಿವಿ ದೃಶ್ಯದಿಂದ ಬಯಾಲಾಗಿದೆ. ಶಂಕರಾಚಾರ್ಯರ ಪ್ರತಿಮೆಯ ಮೇಲೆ ಬಾವುಟ ಹಾಕಿ ಅಶಾಂತಿ ಮೂಡಿಸುವ ಯತ್ನ ಮಾಡಿದ್ದು, ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಅವರು ಪ್ರತಿಕ್ರಿಯಿಸಿದ್ದು, ಆರೋಪಿಯು ಕುಡಿದ ಮತ್ತಿನಲ್ಲಿ ಈ ಕೃತ್ಯವೆಸಗಿದ್ದಾನೆ. ಆರೋಪಿಯು ಯಾವುದೇ ಸಂಘಟನೆ ಅಥವಾ ಪಕ್ಷಕ್ಕೆ ಸೇರಿದವನಲ್ಲ. ಇದು ಪೂರ್ವ ನಿಯೋಜಿತ ಕೃತ್ಯವಲ್ಲ. ತನಿಖೆಯ ಸಂದರ್ಭ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…