ಚಿಕ್ಕಬಳ್ಳಾಪುರ: ಶೇಕಡಾ 50 ರಷ್ಟು ಮಾತ್ರ ಮುಸ್ಲಿಮರು ಮತದಾನ ಮಾಡುತ್ತಿದ್ದಾರೆ. ಇನ್ನುಳಿದ 50 ಶೇಕಡಾ ಮುಸ್ಲಿಂ ಬಾಂಧವರು ಮತದಾನ ಮಾಡುತ್ತಿಲ್ಲ, ಹೀಗಾಗಿ ಕಳೆದ ಬಾರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಬಾಗೇಪಲ್ಲಿಯಲ್ಲಿ ಮಂಗಳವಾರ ಶಾದಿಮಹಲ್ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿರುವ ಶೇಕಡಾ 90 ರಷ್ಟು ಮುಸ್ಲಿಮರು ಮತದಾನ ಮಾಡಿದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ರಾಹುಲ್ ಗಾಂಧಿ ಅವರು ಮುಂದಿನ ಪ್ರಧಾನಿಯಾಗಲಿದ್ದಾರೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂದರು.
ಈ ಬಾರಿ ಶೇ.90ರಷ್ಟು ಮುಸ್ಲಿಂ ಬಾಂಧವರು ಮತದಾನ ಮಾಡಿದರೆ ಈ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಲ್ಲದೇ ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಮುಂದಿನ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲು ತಯಾರಾಗಿರುವ ಸಂಸದ ವೀರಪ್ಪ ಮೊಯ್ಲಿಗೆ ಅವರಿಗೆ ಮತ ನೀಡುವಂತೆ ಜಮೀರ್ ಅವರು ಚುನಾವಣಾ ಪ್ರಚಾರ ನಡೆಸಿದರು.
ಪುಲ್ವಮಾ ಉಗ್ರ ದಾಳಿ ಕುರಿತು ಮಾತನಾಡಿದ ಅವರು ಹುತಾತ್ಮ ಯೋಧರಲ್ಲಿ ಓರ್ವ ಮುಸ್ಲಿಂ ಯೋಧನೂ ಇದ್ದ. ನಾವೆಲ್ಲರೂ ಹಿಂದೂಸ್ಥಾನದವರು ಇಂತಹ ದಾಳಿಯನ್ನು ಖಂಡಿಸಬೇಕು ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…