ಚಿಕ್ಕಬಳ್ಳಾಪುರ: ಶೇಕಡಾ 50 ರಷ್ಟು ಮಾತ್ರ ಮುಸ್ಲಿಮರು ಮತದಾನ ಮಾಡುತ್ತಿದ್ದಾರೆ. ಇನ್ನುಳಿದ 50 ಶೇಕಡಾ ಮುಸ್ಲಿಂ ಬಾಂಧವರು ಮತದಾನ ಮಾಡುತ್ತಿಲ್ಲ, ಹೀಗಾಗಿ ಕಳೆದ ಬಾರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದರು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಬಾಗೇಪಲ್ಲಿಯಲ್ಲಿ ಮಂಗಳವಾರ ಶಾದಿಮಹಲ್ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.
ದೇಶದಲ್ಲಿರುವ ಶೇಕಡಾ 90 ರಷ್ಟು ಮುಸ್ಲಿಮರು ಮತದಾನ ಮಾಡಿದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ರಾಹುಲ್ ಗಾಂಧಿ ಅವರು ಮುಂದಿನ ಪ್ರಧಾನಿಯಾಗಲಿದ್ದಾರೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂದರು.
ಈ ಬಾರಿ ಶೇ.90ರಷ್ಟು ಮುಸ್ಲಿಂ ಬಾಂಧವರು ಮತದಾನ ಮಾಡಿದರೆ ಈ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಲ್ಲದೇ ರಾಹುಲ್ ಗಾಂಧಿಯೇ ಮುಂದಿನ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಮುಂದಿನ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮತ್ತೆ ಕಣಕ್ಕಿಳಿಯಲು ತಯಾರಾಗಿರುವ ಸಂಸದ ವೀರಪ್ಪ ಮೊಯ್ಲಿಗೆ ಅವರಿಗೆ ಮತ ನೀಡುವಂತೆ ಜಮೀರ್ ಅವರು ಚುನಾವಣಾ ಪ್ರಚಾರ ನಡೆಸಿದರು.
ಪುಲ್ವಮಾ ಉಗ್ರ ದಾಳಿ ಕುರಿತು ಮಾತನಾಡಿದ ಅವರು ಹುತಾತ್ಮ ಯೋಧರಲ್ಲಿ ಓರ್ವ ಮುಸ್ಲಿಂ ಯೋಧನೂ ಇದ್ದ. ನಾವೆಲ್ಲರೂ ಹಿಂದೂಸ್ಥಾನದವರು ಇಂತಹ ದಾಳಿಯನ್ನು ಖಂಡಿಸಬೇಕು ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…