Categories: ಉಡುಪಿ

ಶೈಕ್ಷಣಿಕ ಯೋಜನೆಗಳ ಅನುಷ್ಠಾನದಲ್ಲಿ ಅಭಿವೃದ್ಧಿ ಪಥದಲ್ಲಿ ಮಾದರಿಯಾಗಿ ಮೂಡಿ ಬರುತ್ತಿದೆ ಬೆಳಪು ಗ್ರಾಮ -Vishwanews24

ಕಾಪು: ಸುಡುಗಾಡು – ಕುಗ್ರಾಮ ಎಂದೇ ಪ್ರಸಿದ್ಧಿ ಹೊಂದಿದ್ದ, ಜಿಲ್ಲೆಯಲ್ಲಿಯೇ ಅತೀ ಕಡಿಮೆ ಆದಾಯ ಹೊಂದಿರುವ ಕಂದಾಯ ಗ್ರಾಮವಾಗಿರುವ ಬೆಳಪು ಇದೀಗ ಅಭಿವೃದ್ಧಿಯಲ್ಲಿ ಸರಕಾರ ಮತ್ತು ಸರಕಾರೇತರ ಯೋಜನೆಗಳ ಅನುಷ್ಠಾನದಲ್ಲಿ ಮಾದರಿಯಾಗಿ ಮೂಡಿ ಬರುತ್ತಿದೆ.

ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿರುವ ಬೆಳಪು ಗ್ರಾಮದಲ್ಲಿ ಅತ್ಯಾಧುನಿಕ ಸಂಶೋಧನಾ ಕೇಂದ್ರ, ಪಿ.ಜಿ. ಸೆಂಟರ್‌, ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು ಮತ್ತು ಕೈಗಾರಿಕಾ ಪಾರ್ಕ್‌ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು ಕಾರ್ಯಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಬೆಳಪು ಮತ್ತು ಸುತ್ತಲಿನ ಗ್ರಾಮಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶವನ್ನು ಅವಲಂಬಿಸುವ ಕಾಲವಿತ್ತು. ಆದರೆ ಇದೀಗ ಬೆಳಪು ಗ್ರಾಮದಲ್ಲಿ ಉನ್ನತ ಶಿಕ್ಷಣದೊಂದಿಗೆ ತಾಂತ್ರಿಕ ಶಿಕ್ಷಣ, ಸಂಶೋಧನಾ ಶಿಕ್ಷಣಕ್ಕೆ ಅವಕಾಶ ಒದಗಿಸಿಕೊಡುವ ಯೋಜನೆಗಳು ಅನುಷ್ಠಾನಗೊಳ್ಳುತ್ತಿರುವುದು ದೇಶ ದಲ್ಲಿಯೇ ಪ್ರಥಮದ್ದಾಗಿದೆ.

ಮಂಗಳೂರು ವಿಶ್ವ ವಿದ್ಯಾಲಯ ಸಂಯೋಜಿತ ಅತ್ಯಾಧುನಿಕ ಸಂಶೋಧನಾ ಕೇಂದ್ರದ ನಿರ್ಮಾಣ ಕಾಮಗಾರಿಯ ಪ್ರಥಮ ಹಂತದಲ್ಲಿ ಕಾಮಗಾರಿಯು ನಡೆಯುತ್ತಿದ್ದು, 49.25 ಕೋಟಿ ರೂ. ವೆಚ್ಚದ ಬಹುಮಹಡಿ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ. ಕರ್ನಾಟಕ ಹೌಸಿಂಗ್‌ ಬೋರ್ಡ್‌ನ ಮೂಲಕ ಸಂಶೋಧನಾ ಕೇಂದ್ರದ ಕಾಮಗಾರಿ ನಡೆಯುತ್ತಿದ್ದು ಕಾಪು ದೇವಿಪ್ರಸಾದ್‌ ಕನ್‌ಸ್ಟÅಕ್ಷನ್ಸ್‌ನ ಕೆ. ವಾಸುದೇವ ಶೆಟ್ಟಿ ಅವರು ಕಾಮಗಾರಿಯ ಗುತ್ತಿಗೆ ವಹಿಸಿ ಕೊಂಡಿದ್ದಾರೆ.

ಬೆಳಪು ಗ್ರಾಮದ ಜನತೆಯ ಬಹುಕಾಲದ ಕನಸು ಈಗ ನನಸಾಗುತ್ತಿದೆ. ತ್ರವಳಿ ಬೃಹತ್‌ ಯೋಜನೆಗಳು ಏಕಕಾಲದಲ್ಲಿ, ಒಂದೇ ಗ್ರಾಮದಲ್ಲಿ ಕಾರ್ಯಗತಗೊಳ್ಳುತ್ತಿದ್ದು, ಆ ಮೂಲಕ ನಮ್ಮ ಹೋರಾಟಕ್ಕೆ ಫಲ ಸಿಕ್ಕಿದೆ. ಈ ಯೋಜನೆಗಳು ಮುಂದಿನ ಯುವ ಪೀಳಿಗೆಗೆ ಆದರ್ಶವಾಗುವ ಯೋಜನೆಗಳಾಗಿದ್ದು ಗ್ರಾಮೀಣಾಭಿವೃದ್ಧಿಯಲ್ಲಿ ದೀರ್ಘ‌ಕಾಲ ಸಲ್ಲಿಸಿರುವ ಸೇವೆಗೆ ಈಗ ಸಾರ್ಥಕವಾಗಿದೆ. ಗಾಂಧೀಜಿಯವರ ಗ್ರಾಮ ರಾಜ್ಯದ ಕನಸು ನನಸಾಗುತ್ತಿದ್ದು, ಗಾಂಧಿ – 150 ಕಾರ್ಯಕ್ರಮಕ್ಕೆ ಪೂರಕವಾಗಿ ಬೆಳಪುವಿನಲ್ಲಿ ಗಾಂಧಿ ಗ್ರಾಮ ಸ್ಥಾಪಿಸುವ ಕಲ್ಪನೆ ನಮ್ಮದಾಗಿದೆ.

-ಡಾ| ದೇವಿಪ್ರಸಾದ್‌ ಶೆಟ್ಟಿ, ಅಧ್ಯಕ್ಷರು, ಬೆಳಪು ಗ್ರಾಮ ಪಂಚಾಯತ್‌

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

15 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

15 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

15 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

16 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

16 hours ago