Categories: ಉಡುಪಿ

ಶೈಕ್ಷಣಿಕ ಯೋಜನೆಗಳ ಅನುಷ್ಠಾನದಲ್ಲಿ ಅಭಿವೃದ್ಧಿ ಪಥದಲ್ಲಿ ಮಾದರಿಯಾಗಿ ಮೂಡಿ ಬರುತ್ತಿದೆ ಬೆಳಪು ಗ್ರಾಮ -Vishwanews24

ಕಾಪು: ಸುಡುಗಾಡು – ಕುಗ್ರಾಮ ಎಂದೇ ಪ್ರಸಿದ್ಧಿ ಹೊಂದಿದ್ದ, ಜಿಲ್ಲೆಯಲ್ಲಿಯೇ ಅತೀ ಕಡಿಮೆ ಆದಾಯ ಹೊಂದಿರುವ ಕಂದಾಯ ಗ್ರಾಮವಾಗಿರುವ ಬೆಳಪು ಇದೀಗ ಅಭಿವೃದ್ಧಿಯಲ್ಲಿ ಸರಕಾರ ಮತ್ತು ಸರಕಾರೇತರ ಯೋಜನೆಗಳ ಅನುಷ್ಠಾನದಲ್ಲಿ ಮಾದರಿಯಾಗಿ ಮೂಡಿ ಬರುತ್ತಿದೆ.

ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿಗೊಳ್ಳುತ್ತಿರುವ ಬೆಳಪು ಗ್ರಾಮದಲ್ಲಿ ಅತ್ಯಾಧುನಿಕ ಸಂಶೋಧನಾ ಕೇಂದ್ರ, ಪಿ.ಜಿ. ಸೆಂಟರ್‌, ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು ಮತ್ತು ಕೈಗಾರಿಕಾ ಪಾರ್ಕ್‌ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜು ಕಾರ್ಯಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ.

ಬೆಳಪು ಮತ್ತು ಸುತ್ತಲಿನ ಗ್ರಾಮಗಳ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶವನ್ನು ಅವಲಂಬಿಸುವ ಕಾಲವಿತ್ತು. ಆದರೆ ಇದೀಗ ಬೆಳಪು ಗ್ರಾಮದಲ್ಲಿ ಉನ್ನತ ಶಿಕ್ಷಣದೊಂದಿಗೆ ತಾಂತ್ರಿಕ ಶಿಕ್ಷಣ, ಸಂಶೋಧನಾ ಶಿಕ್ಷಣಕ್ಕೆ ಅವಕಾಶ ಒದಗಿಸಿಕೊಡುವ ಯೋಜನೆಗಳು ಅನುಷ್ಠಾನಗೊಳ್ಳುತ್ತಿರುವುದು ದೇಶ ದಲ್ಲಿಯೇ ಪ್ರಥಮದ್ದಾಗಿದೆ.

ಮಂಗಳೂರು ವಿಶ್ವ ವಿದ್ಯಾಲಯ ಸಂಯೋಜಿತ ಅತ್ಯಾಧುನಿಕ ಸಂಶೋಧನಾ ಕೇಂದ್ರದ ನಿರ್ಮಾಣ ಕಾಮಗಾರಿಯ ಪ್ರಥಮ ಹಂತದಲ್ಲಿ ಕಾಮಗಾರಿಯು ನಡೆಯುತ್ತಿದ್ದು, 49.25 ಕೋಟಿ ರೂ. ವೆಚ್ಚದ ಬಹುಮಹಡಿ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ. ಕರ್ನಾಟಕ ಹೌಸಿಂಗ್‌ ಬೋರ್ಡ್‌ನ ಮೂಲಕ ಸಂಶೋಧನಾ ಕೇಂದ್ರದ ಕಾಮಗಾರಿ ನಡೆಯುತ್ತಿದ್ದು ಕಾಪು ದೇವಿಪ್ರಸಾದ್‌ ಕನ್‌ಸ್ಟÅಕ್ಷನ್ಸ್‌ನ ಕೆ. ವಾಸುದೇವ ಶೆಟ್ಟಿ ಅವರು ಕಾಮಗಾರಿಯ ಗುತ್ತಿಗೆ ವಹಿಸಿ ಕೊಂಡಿದ್ದಾರೆ.

ಬೆಳಪು ಗ್ರಾಮದ ಜನತೆಯ ಬಹುಕಾಲದ ಕನಸು ಈಗ ನನಸಾಗುತ್ತಿದೆ. ತ್ರವಳಿ ಬೃಹತ್‌ ಯೋಜನೆಗಳು ಏಕಕಾಲದಲ್ಲಿ, ಒಂದೇ ಗ್ರಾಮದಲ್ಲಿ ಕಾರ್ಯಗತಗೊಳ್ಳುತ್ತಿದ್ದು, ಆ ಮೂಲಕ ನಮ್ಮ ಹೋರಾಟಕ್ಕೆ ಫಲ ಸಿಕ್ಕಿದೆ. ಈ ಯೋಜನೆಗಳು ಮುಂದಿನ ಯುವ ಪೀಳಿಗೆಗೆ ಆದರ್ಶವಾಗುವ ಯೋಜನೆಗಳಾಗಿದ್ದು ಗ್ರಾಮೀಣಾಭಿವೃದ್ಧಿಯಲ್ಲಿ ದೀರ್ಘ‌ಕಾಲ ಸಲ್ಲಿಸಿರುವ ಸೇವೆಗೆ ಈಗ ಸಾರ್ಥಕವಾಗಿದೆ. ಗಾಂಧೀಜಿಯವರ ಗ್ರಾಮ ರಾಜ್ಯದ ಕನಸು ನನಸಾಗುತ್ತಿದ್ದು, ಗಾಂಧಿ – 150 ಕಾರ್ಯಕ್ರಮಕ್ಕೆ ಪೂರಕವಾಗಿ ಬೆಳಪುವಿನಲ್ಲಿ ಗಾಂಧಿ ಗ್ರಾಮ ಸ್ಥಾಪಿಸುವ ಕಲ್ಪನೆ ನಮ್ಮದಾಗಿದೆ.

-ಡಾ| ದೇವಿಪ್ರಸಾದ್‌ ಶೆಟ್ಟಿ, ಅಧ್ಯಕ್ಷರು, ಬೆಳಪು ಗ್ರಾಮ ಪಂಚಾಯತ್‌

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago