ಶೋಭಾ ಕರಂದ್ಲಾಜೆಯ ಸೆಲ್ಫಿಗೆ ಬೆಲೆ ಕಟ್ಟುವ ಮುನ್ನಾ ಮಿಥುನ್ ರೈ ತನ್ನ ಯೋಗ್ಯತೆ ಅರಿತುಕೊಳ್ಳಲಿ: ವೀಣಾ ಶೆಟ್ಟಿಯಿಂದ ಶೋಭಾ ಪರ ಬ್ಯಾಟಿಂಗ್
ಉಡುಪಿ: ಕಳೆದೆರಡು ದಿನಗಳ ಹಿಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆಯೊಂದರಲ್ಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಕಾಣುತ್ತಿಲ್ಲ ಅವರ ಜತೆಗೆ ನಿಂತು ಸೆಲ್ಫಿಗೆ ತೆಗೆದು ಕಳುಹಿಸಿದ ಸಾರ್ವಜನಿಕವಾಗಿ ರೂಪಾಯಿ500 ಬಹುಮಾನ ಘೋಷಿಸಿರುವ ವಿಚಾರವಾಗಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚ ಕೆಂಡಮಂಡಳವಾಗಿ ಅಕ್ರೋಶ ಹೊರಹಾಕಿದ್ದಾರೆ.
ಇದೇ ವಿಚಾರವಾಗಿ ಉಡುಪಿ ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಪ್ರತಿಕ್ರಿಯಿಸಿ ” ಮಿಥುನ್ ರೈ ನಾಲಿಗೆ ಬಿಗಿ ಹಿಡಿದು ಮಾತನಾಡುವುದನ್ನ ಕಲಿಯಬೇಕು ,ಕಾಂಗ್ರೆಸ್ ಆಡಳಿತದ ಸಮಯದಲ್ಲಿ ಇವರ ಸಚಿವರು ಎಲ್ಲಿ ಇದ್ದರೂ ಹೇಗೆ ಇದ್ದರು ಎಂಬುದೇನೂ ಗುಟ್ಟಾಗಿ ಉಳಿದಿಲ್ಲ ಸಚಿವೆ ಶೋಭಾ ಕರಂದ್ಲಾಜೆಯ ಕಾರ್ಯವೈಖರಿಯ ಬಗ್ಗೆ ಚೂರು ನೋಡಿ ತಿಳಿದುಕೊಳ್ಳಲಿ ಮತ್ತು ಆಕೆಯ ಬಗ್ಗೆ ಮಾತಾಡುವ ಮುನ್ನ ತನ್ನ ಯೋಗ್ಯತೆಯನ್ನು ಅರಿತು ಕೊಂಡು ಬಾಲಿಶ ಹೇಳಿಕೆ ನೀಡಲಿ ಎಂದರು.
ಕಾಂಗ್ರೆಸ್ ಅಧಿಕಾರಿವಿಲ್ಲದೆ ಮತಿಭ್ರಮನೆಗೊಂಡಿದೆ ಮತ್ತು ದಕ ದಲ್ಲಿ ಮಿಥುನ್ ರೈ ತನ್ನ ಅಸ್ತಿತ್ವ ಕಳೆದುಕೊಂಡಿರುವ ಕಾರಣದಿಂದಾಗಿ ಈ ರೀತಿಯ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಮುಂದಿನ ದಿನಗಳಲ್ಲಿ ಇದೇ ರೀತಿ ಮಾತನಾಡಿದಲ್ಲಿ ಮಹಿಳಾಮೋರ್ಚ ತಕ್ಕ ಶಾಸ್ತಿಮಾಡಲಿದೆ ಎಂದು ಅವರು ತಿಳಿಸಿದರು.
ಮಿಥುನ್ ರೈ ಹೇಳಿಕೆಯ ಬಗ್ಗೆ ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಮುಖಂಡರು ಕಿಡಿಕಾರಿದ್ದರು.
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…
ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…