ಉಡುಪಿ: ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಯಾರೋ ಮಾಡಿದ ಸಾಧನೆಯನ್ನು ತಾನು ಮಾಡಿದ್ದು ಎಂದು ಹೇಳಿಕೊಂಡದ್ದು ಬಿಟ್ಟರೆ ಬೇರೆನೂ ಮಾಡಿಲ್ಲ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಅವರು ಶನಿವಾರ ನಗರದ ಪ್ರೆಸ್ ಕ್ಲಬ್ಬಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಇತ್ತೀಚೆಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ನನ್ನ ಅವಧಿಯಲ್ಲಿ ನನ್ನ ಪ್ರಯತ್ನದಿಂದ ಉಪ್ಪೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಸರ್ಕಾರಿ ಉಪಕರಣಗಾರ ತರಬೇತಿ ಕೇಂದ್ರಕ್ಕೆ ಭೇಟಿ ಮಾಡಿ ಕೇಂದ್ರ ಸರಕಾರದ ಸಾಧನೆ ಎಂದು ಹೇಳಿಕೊಂಡು ಉಡುಪಿ ಶಾಸಕ ಟ್ವೀಟ್ ಮಾಡಿಕೊಂಡಿದ್ದು ಸತ್ಯಕ್ಕೆ ದೂರವಾಗಿದೆ. ತಾನು ಶಾಸಕನಾದ ಬಳಿಕ 2013ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಪಿಜಿ ಸೆಂಟರ್ ಬೆಳಪುವಿಗೆ ವರ್ಗಾವಣೆಗೊಂಡಾಗ ರಘಪತಿ ಭಟ್ ನನ್ನ ವಿರುದ್ದ ಆರೋಪ ಮಾಡಿದ್ದರು.
ಆಗ ನಾನು ಇಲ್ಲಿನ ವಿದ್ಯಾರ್ಥಿಗಳಿಗೆ ಸಹಕಾರವಾಗಲಿ ಎಂಬ ನಿಟ್ಟಿನಲ್ಲಿ ಅಂದಿನ ಸಣ್ಣಕೈಗಾರಿಕೆ ಸಚಿವರಾದ ಸತೀಶ್ ಜಾರಕಿ ಹೊಳಿ ಮತ್ತು ಪ್ರಕಾಶ್ ಹುಕ್ಕೆರಿಯವರಲ್ಲಿ ವಿನಂತಿ ಮಾಡಿ ಉಪ್ಪೂರಿನ ಸರ್ಕಾರಿ ಪ್ರೌಢ ಶಾಲೆಯಲ್ಲಿ 5 ಎಕ್ರೆ ಜಾಗದಲ್ಲಿ ಸರ್ಕಾರಿ ಉಪಕರಣಗಾರ ತರಬೇತಿ ಕೇಂದ್ರಕ್ಕೆ ಮಂಜೂರಾತಿ ಕೊಟ್ಟು ರೂ 48 ಕೋಟಿ ಹಣವನ್ನು ನಬಾರ್ಡ್ ಮೂಲಕ ಮಂಜೂರಾತಿ ಕೊಡಿಸಿದ್ದೆ. ಇದರ ಮೂಲಕ ಜನರಿಗೆ ನೀಡಿದ ಮಾತನ್ನು ಉಳಿಸಿಕೊಂಡಿದ್ದೆ ಎಂದರು.
ಸಂಸದೆ ಶೋಭಾ ಕರಂದ್ಲಾಜೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಚೀಪ್ ರಾಜಕಾರಣಿ ಎಂದು ಕರೆದಿದ್ದಾರೆ ಆದರೆ ಅವರ ಅವಧಿಯು ರಾಜ್ಯದಲ್ಲಿ ಸುವರ್ಣಯುಗ ಆಗಿತ್ತು ಎನ್ನುವುದು ಶೋಭಾ ಮರೆತಿದ್ದಾರೆ. ಉಪ್ಪೂರಿನಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಉಪಕರಣಗಾರ ತರಬೇತಿ ಕೇಂದ್ರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ನಯಾಪೈಸೆ ಹಣ ನೀಡದೇ ಹೋದರೂ ಕೂಡ ಯಾರೋ ಮಾಡಿದ ಕೆಲಸವನ್ನು ತಾನು ಮಾಡಿದ ಕೆಲಸ ಎಂದು ಹೇಳಿಕೊಳ್ಳುತ್ತಿದ್ದಾರೆ ಇದರು ನಾಚಿಕೆಗೇಡಿನ ಸಂಗತಿಯಾಗಿದೆ. ಸದ್ಯ ಉಪ್ಪೂರು ಸರಕಾರಿ ಪ್ರೌಢ ಶಾಲೆಗೆ ಕ್ರೀಡಾಂಗಣದ ಕೊರತೆಯಿದ್ದು ಸಂಸದೆ ಶೋಭಾ ಮತ್ತು ಶಾಸಕ ರಘುಪತಿ ಭಟ್ ಅವರು ತಲಾ ರೂ10 ಲಕ್ಷ ಅನುದಾನ ಬಿಡುಗಡೆ ಮಾಡಲಿ ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ನಾಯಕರಾದ ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ, ಜನಾರ್ದನ ಭಂಡಾರ್ಕರ್ ಹಾಗೂ ಇತರರು ಉಪಸ್ಥಿತರಿದ್ದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…